Categories: Ripponpete

Accident | Shivamogga | ರಿಪ್ಪನ್‌ಪೇಟೆ : ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರ !

ರಿಪ್ಪನ್‌ಪೇಟೆ : ಎರಡು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.

ರಿಪ್ಪನ್‌ಪೇಟೆ-ಹೊಸನಗರ ಮಾರ್ಗವಾಗಿ ಶಿವಮೊಗ್ಗದಿಂದ ಹೊಸನಗರ ನಗರ ಕಡೆಗೆ ಬರುತ್ತಿದ ಸಂದರ್ಭದಲ್ಲಿ ಶಾಂತಪುರ ಬಳಿ ಮುಂದೆ ಬರುತಿದ್ದ ಲಾರಿಯ ಹೆಡ್ ಲೈಟ್ ಕಣ್ಣಿಗೆ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ರಸ್ತೆ ಪಕ್ಕಕ್ಕೆ ಬಿದ್ದ ಪರಿಣಾಮ ಬೈಕ್ ಸವಾರ ತಲೆಗೆ ತೀವ್ರ ತರನಾದ ಪೆಟ್ಟು ಬಿದಿದ್ದು ತೀವ್ರ ರಕ್ತಸ್ರಾವವಾಗಿದೆ.


ಬೈಕ್ ಸವಾರ ಮೋಹನ್ (22) ವಾರಂಬಳ್ಳಿ ಯುವಕ ಎಂದು ತಿಳಿದು ಬಂದಿದೆ. ಯುವಕ ಬೈಕ್ ಓಡಿಸುವ ಸಮಯ ಹೆಲ್ಮೆಟ್ ಹಾಕದೆ ಇರುವುದು ತಲೆಗೆ ಅಧಿಕ ಹೊಡೆತ ಬಿದಿದ್ದೆ ಎಂದು ತಿಳಿದು ಬಂದಿದ್ದು ತಕ್ಷಣ 108 ಆಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕೆತ್ಸೆ ನೀಡಿ ಹೆಚ್ಜಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನೊಂದು ಅಪಘಾತ ಪ್ರಕರಣ ನಡೆದಿದ್ದು ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೈಂಡರ್ (KA 01 S 8450) ಬೈಕುಗಳ ನಡುವೆ ಡಿಕ್ಕಿಯಾಗಿದೆ.

ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತ ಸ್ರಾವವಾಗಿದೆ. ಅಪಘಾತ ನಡೆದು ಅರ್ಧ ಗಂಟೆ ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ದಾರಿಹೋಕರು ಸಹಾಯಕ್ಕೆ ಬರಲಿಲ್ಲ.

ಸುದ್ದಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲು 108 ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Malnad Times

Recent Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

2 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

6 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

19 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

21 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

22 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

1 day ago