ರಿಪ್ಪನ್ಪೇಟೆ: 21 ಸದಸ್ಯ ಬಲದ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿಯಲ್ಲಿ 11 ಬಿಜೆಪಿ ಬೆಂಬಲಿತ ಸದಸ್ಯರು 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದು ಎರಡೂವರೆ ವರ್ಷದ ಅವಧಿಗೆ ಬಿಜೆಪಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದು ಈಗ ಇದೇ 11 ರಂದು ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ದಿನಾಂಕ ನಿಗದಿಯಾಗಿದ್ದು ಅದೃಷ್ಟ ಲಕ್ಷ್ಮಿ ಕಾಂಗ್ರೆಸ್ಗೊ ಬಿಜೆಪಿಗೊ ಎಂಬುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
ಈಗಾಗಲೇ ಬಿಜೆಪಿ ಬೆಂಬಲಿತ 11 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ವಿನೋಧ ಹಿರಿಯಣ್ಣ ಅಥವಾ ದೀಪಾ ಸುಧೀರ್ ಎಂದು ಹೇಳಲಾಗುತ್ತಿದ್ದರೆ ಕಾಂಗ್ರೆಸ್ ಪಕ್ಷದಿಂದ ಧನಲಕ್ಷ್ಮಿ ಎಂದು ಬಿಂಬಿಸಲಾಗುತ್ತಿದೆ. ಆದರೆ ಕೊನೆ ಗಳಿಗೆಯಲ್ಲಿ ಹಾಲಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆಶೀರ್ವಾದಕ್ಕೆ ಕಾದುಕುಳಿತಂತೆ ಕಾಣುತ್ತಿದ್ದು ಒಟ್ಟಾರೆ ಅದೃಷ್ಟ ಲಕ್ಷ್ಮಿ ಯಾರಿಗೆ ಒಲಿಯುತ್ತಾಳೆಂಬುದು ಇನ್ನೂ ನಿಗೂಢವಾಗಿದೆ.
ಒಟ್ಟಾರೆಯಾಗಿ ಕಳೆದ ಬಾರಿಯಲ್ಲಿ ಹರತಾಳು ಹಾಲಪ್ಪನವರಿಗೆ ಪ್ರತಿಷ್ಟೆಯಾಗಿದ್ದ ಗ್ರಾಮ ಪಂಚಾಯ್ತಿ ಆಡಳಿತ ಈ ಬಾರಿಯಲ್ಲಿ ಗೋಪಾಲಕೃಷ್ಣ ಬೇಳೂರರಿಗೆ ಪ್ರತಿಷ್ಟೆಯಾಗಿದ್ದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯುತ್ತಾ ಅಥವಾ ಬಿಜೆಪಿ ಸೋತು ಸುಣ್ಣವಾಗಿದ್ದರೂ ಗ್ರಾಮ ಪಂಚಾಯ್ತಿ ಅಧಿಕಾರವನ್ನು ಶತಾಯಗತಾಯ ಹಿಡಿಯುವ ಉತ್ಸಾಹದಲ್ಲಿ ತೆರೆಮರೆಯಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವುದು ನೋಡಿದರೆ ಪುನಃ ಬಿಜೆಪಿ ಅಧಿಕಾರ ಹಿಡಿಯುವುದು ಗ್ಯಾರಂಟಿಯಾದಂತಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…