ರಿಪ್ಪನ್ಪೇಟೆ: ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ದ ಬ್ಯಾಂಕಿನ ಈ ಹಿಂದಿನ ಮಾನೇಜರ್ ಮಿಥುನ್ ವಿರುದ್ದ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ದ ದೂರು ದಾಖಲಿಸಿದ್ದಾರೆ.
ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ದ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ. ಠೇವಣಿ ಇಟ್ಟು ತಮ್ಮ ಓಡಿ ಖಾತೆಯಲ್ಲಿ 1.5 ಲಕ್ಷ ರೂ. ಸಾಲ ಪಡೆದಿದ್ದರು. 2017 ರಲ್ಲಿ ಸಾಲ ಪಡೆದ ಬ್ಯಾಣದರವರು ಕೊರೋನಾ ವೇಳೆ ಸಾಲ ತೀರಿಸಲು ಕಷ್ಟವಾಗಿತ್ತು. ಹಿಂದಿನ ಮ್ಯಾನೇಜರ್ರವರು ಚೆಕ್ ಮತ್ತು ಬರೆದು ಕೊಟ್ಟಿದ್ದ ಪತ್ರಗಳನ್ನ ದುರುಪಯೋಗ ಪಡಿಸಿಕೊಂಡು ಅವರ ಓಡಿ ಸಾಲವನ್ನು 2.5 ಲಕ್ಷ ರೂ. ಗೆ ಹೆಚ್ಚಿಸಿದ್ದು ಇವರ ದಾಖಲಾತಿಗಳನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ಬ್ಯಾಣದ ಎಫ್ಐಆರ್ನಲ್ಲಿ ಆರೋಪಿಸಿದ್ದಾರೆ.
ಸಾಲ ಪಡೆಯುವಾಗ ಬ್ಯಾಂಕ್ನಲ್ಲಿಟ್ಟಿದ್ದ ದಾಖಲಾತಿಯನ್ನು ವಾಪಾಸ್ಸು ಕೇಳಿದರೆ ಈಗಿನ ಮ್ಯಾನೇಜರ್ ಕೊಡುವಲ್ಲಿ ವಿಫಲರಾಗಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ನಲ್ಲಿದ್ದ ಇವರ ಪತ್ನಿ ಹೆಸರಿನಲ್ಲಿರುವ ಚೆಕ್ಬೌನ್ಸ್ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಿಲಾಗಿದೆ.
ನಿಧನ ವಾರ್ತೆ
ರಿಪ್ಪನ್ಪೇಟೆ : ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದಳ್ಳಿ ವಾಸಿ ಸಣ್ಣಚಂದಳ್ಳಿ ನಾಗರಾಜಪ್ಪ (85) ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ನಾಲ್ಕು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಆಂತ್ಯಕ್ರಿಯೆಯು ಚಂದಳ್ಳಿಯ ಅವರ ಜಮೀನಿಲ್ಲಿ ಗಂಗಾಮತಸ್ಥರ ಸಂಪ್ರದಾಯದಂತೆ ಜರುಗಿತು. ಕುಟುಂಬ ಮೂಲಗಳು ತಿಳಿಸಿದೆ.ಶದಗ
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…