Categories: Ripponpete

ರಿಪ್ಪನ್‌ಪೇಟೆ ; ಬೈಕಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀ. ಮದ್ಯ ವಶ, ಆರೋಪಿ ಬಂಧನ

ರಿಪ್ಪನ್‌ಪೇಟೆ ; ಬೈಕಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 25.92 ಲೀ. ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ.

ವಿಧಾನಸಭಾ ಚುನಾವಣೆ ನೀತಿ ಸಮಿತಿ ಜಾರಿ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಆಯುಕ್ತರು ಹಾಗೂ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗ ರವರ ನಿರ್ದೇಶನದಲ್ಲಿ ಹಾಗೂ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು ಹೊಸನಗರ ಉಪವಿಭಾಗ ಹೊಸನಗರ ರವರ ಹಾಗೂ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ಹೊಸನಗರ ರವರ ಮಾರ್ಗದರ್ಶನದಲ್ಲಿ ರಿಪ್ಪನ್‌ಪೇಟೆ – ಶಿವಮೊಗ್ಗ ಮುಖ್ಯ ರಸ್ತೆಯ ಸಿದ್ದಪ್ಪನಗುಡಿ ಕ್ರಾಸ್ ನಲ್ಲಿ ಶುಕ್ರವಾರ ರಸ್ತೆಗಾವಲು ನಡೆಸಿ ವಾಹನ ತಪಾಸಣೆ ಮಾಡುತ್ತಿರುವಾಗ ಹೀರೋ ಹೋಂಡಾ ಗ್ಲಾಮರ್ ದ್ವಿಚಕ್ರ ವಾಹನ (K A 15 L 4425)ದಲ್ಲಿ ಒಬ್ಬ ವ್ಯಕ್ತಿಯು ಅಕ್ರಮವಾಗಿ 25.92 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ದ್ವಿಚಕ್ರವಾಹನ ಸಮೇತ ಮಾಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಶಪಡಿಸಿಕೊಂಡ 25.92 ಲೀಟರ್ ಮದ್ಯದ ಒಟ್ಟು ಮೌಲ್ಯ 10,117 ರೂ. ಹಾಗೂ ದ್ವಿಚಕ್ರ ವಾಹನದ ಮೌಲ್ಯ 60 ಸಾವಿರ ರೂ. ಆಗಿರುತ್ತದೆ.

ಈ ದಾಳಿಯಲ್ಲಿ ಸಂತೋಷ ರಡ್ಡೇರ ಅಬಕಾರಿ ಉಪ ನಿರೀಕ್ಷಕರು, ಕೆಂಪರಾಮ ಅಬಕಾರಿ ಮುಖ್ಯ ಪೇದೆ, ರಾಘವೇಂದ್ರ ಕೆ ಅಬಕಾರಿ ಪೇದೆ, ಪ್ರಕಾಶ ಎ ಎಂ ಅಬಕಾರಿ ಪೇದೆ ಮತ್ತು ವಾಹನ ಚಾಲಕ ಬಸವರಾಜ ರವರು ಹಾಜರಿದ್ದರು.

Malnad Times

Recent Posts

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

41 mins ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

14 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

16 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

17 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

17 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

18 hours ago