ರಿಪ್ಪನ್‌ಪೇಟೆ ; ಮಾಜಿ ಶಾಸಕ ನಿಧನ !

0 44


ರಿಪ್ಪನ್‌ಪೇಟೆ: ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಉಮಾಕಾಂತ ಬೋರ್ಕರ್ (84) ರವರು ಸೋಮವಾರ ಬೆಳಗ್ಗೆ ಅರಸಾಳುವಿನಲ್ಲಿ ನಿಧನ ಹೊಂದಿದ್ದಾರೆ.


ಶಿರಸಿ ವಿಧಾನಸಭಾ ಕ್ಷೆತ್ರದಲ್ಲಿ 1978 ರಲ್ಲಿ ಜನತಾಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತ್ತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಉಮಾಕಂತ್ ಕಾಂಗ್ರೆಸ್‌ನ ರೇವಣಕರ್ ಶಂಕರ್ ಪುರುಷೋತ್ತಮ್ ಅವರ ವಿರುದ್ದ 2713 ಮತಗಳ ಅಂತರದಿಂದ ಗೆಲುವು ದಾಖಲಿದ್ದರು.


ಪತ್ನಿ ಮತ್ತು ಮಕ್ಕಳನ್ನು ಹೊಂದಿದ್ದಾರೆ. ಅರಸಾಳಿನ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.


ಸಂತಾಪ:

ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಉಮಾಕಾಂತ್ ಬೋರ್ಕರ್ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಜಿ.ಪಂ.ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ಕಲಗೋಡು ರತ್ನಾಕರ್, ಬಿ.ಪಿ.ರಾಮಚಂದ್ರ, ಅಮೀರ್ ಹಂಜಾ, ಆಸೀಫ್ ಭಾಷಾ, ಇನ್ನಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.

error: Content is protected !!