ರಿಪ್ಪನ್ಪೇಟೆ: ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಉಮಾಕಾಂತ ಬೋರ್ಕರ್ (84) ರವರು ಸೋಮವಾರ ಬೆಳಗ್ಗೆ ಅರಸಾಳುವಿನಲ್ಲಿ ನಿಧನ ಹೊಂದಿದ್ದಾರೆ.
ಶಿರಸಿ ವಿಧಾನಸಭಾ ಕ್ಷೆತ್ರದಲ್ಲಿ 1978 ರಲ್ಲಿ ಜನತಾಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತ್ತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಉಮಾಕಂತ್ ಕಾಂಗ್ರೆಸ್ನ ರೇವಣಕರ್ ಶಂಕರ್ ಪುರುಷೋತ್ತಮ್ ಅವರ ವಿರುದ್ದ 2713 ಮತಗಳ ಅಂತರದಿಂದ ಗೆಲುವು ದಾಖಲಿದ್ದರು.
ಪತ್ನಿ ಮತ್ತು ಮಕ್ಕಳನ್ನು ಹೊಂದಿದ್ದಾರೆ. ಅರಸಾಳಿನ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಸಂತಾಪ:
ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಉಮಾಕಾಂತ್ ಬೋರ್ಕರ್ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಜಿ.ಪಂ.ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ಕಲಗೋಡು ರತ್ನಾಕರ್, ಬಿ.ಪಿ.ರಾಮಚಂದ್ರ, ಅಮೀರ್ ಹಂಜಾ, ಆಸೀಫ್ ಭಾಷಾ, ಇನ್ನಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…
ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ, ಕಾರ್ಯದರ್ಶಿ ಅನಿಲ್ಕುಮಾರ್, ಖಜಾಂಚಿ ದೀಪಕ್,…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…
ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…
ರಿಪ್ಪನ್ಪೇಟೆ: ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷ್ಯ ವಹಿಸಿರುವ…
ಶಿವಮೊಗ್ಗ : ಏ. 29 ಸೋಮವಾರ ನಡೆದ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ…