Categories: Ripponpete

ರಿಪ್ಪನ್‌ಪೇಟೆ ವೀರಶೈವ ಸಮಾಜದಿಂದ ಬಿಜೆಪಿ ಅಭ್ಯರ್ಥಿ ಬೆಂಬಲಿಸುವ ನಿರ್ಧಾರ

ರಿಪ್ಪನ್‌ಪೇಟೆ: ಮೇ 10 ರಂದು ನಡೆಯುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರನ್ನು ಬೆಂಬಲಿಸುವಂತೆ ರಿಪ್ಪನ್‌ಪೇಟೆ ವೀರಶೈವ ಸಮಾಜದವರು ನಿರ್ಧಾರ ಕೈಗೊಂಡಿರುವುದಾಗಿ ಪ್ರಕಟಿಸಿದರು.

ಇಲ್ಲಿನ ಶಿವಮಂದಿರದಲ್ಲಿ ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜ್‌ಗೌಡರು ಸುದ್ದಿಗೋಷ್ಠಿ ನಡೆಸಿ, ರಾಜ್ಯದ ಬಿ.ಎಸ್. ಯಡಿಯೂರಪ್ಪ ಮತ್ತು ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ರಿಪ್ಪನ್‌ಪೇಟೆಯ ಶಿವಮಂದಿರಕ್ಕೆ 3.00 ಕೋಟಿ ರೂ. ವಿಶೇಷ ಅನುದಾನವನ್ನು ಕೊಡಿಸುವ ಮೂಲಕ ಸಮಾಜದ ಸರ್ವಾಂಗೀಣ ಅಭಿವೃದ್ದಿಗೆ ಆದ್ಯತೆ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪನವರು ಶ್ರಮಿಸಿದ್ದಾರೆ. ಆ ಕಾರಣದಿಂದಾಗಿ ಈ ಬಾರಿ ಚುನಾವಣೆಯಲ್ಲಿ ಸಮಾಜದವರು ಶಾಸಕ ಹರತಾಳು ಹಾಲಪ್ಪನವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯಿತ ಮುಖ್ಯಮಂತ್ರಿಗಳಲ್ಲಾ ಭ್ರಷ್ಟಾಚಾರಿಗಳು ಎಂದು ಹೇಳಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಈ ಭಾರಿಯ ಚುನಾವಣೆಯಲ್ಲಿ ತಕ್ಕ ಪಾಠಕಲಿಸುವುದಾಗಿ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷ ಎಂ.ಆರ್.ಶಾಂತವೀರಪ್ಪಗೌಡ ಮಸರೂರು, ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ್, ಬೆಳಂದೂರು ಬಿ.ವಿ.ನಾಗಭೂಷಣ, ಕಮದೂರು ಪರಮೇಶ್, ಕೆ.ಎಂ.ಈಶ್ವರಪ್ಪ, ಹೆಚ್.ಎಂ.ವರ್ತೇಶಗೌಡರು,ಬೆನವಳ್ಳಿ ನಿಂಗಪ್ಪಗೌಡ, ಮಹೇಂದ್ರಗೌಡ ಬೆನವಳ್ಳಿ, ಬಿ.ಹೆಚ್.ಸ್ವಾಮಿಗೌಡ ಬೆಳಂದೂರು ಹಾಗೂ ಜೆ.ಎಂ.ಶಾಂತಪ್ಪ ಜಂಬಳ್ಳಿ ಹಾಜರಿದ್ದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

1 hour ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

17 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

17 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

22 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

24 hours ago