ರಿಪ್ಪನ್ಪೇಟೆ: ಸಮೀಪದ ಸೂಡೂರು ಗ್ರಾಮದ ಸೇತುವೆ ಸಮೀಪ ರಿಪ್ಪನ್ಪೇಟೆ – ಆಯನೂರು ರಾಜ್ಯ ಹೆದ್ದಾರಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋ ಮೀಟರ್ ಗೂ ಅಧಿಕ ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ನಡೆದಿದೆ.
ಕುಂದಾಪುರ ಕಡೆಯಿಂದ ಶಿವಮೊಗ್ಗ ಕಡೆ ಚಲಿಸುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಗುದ್ದಿದ ಪರಿಣಾಮ ಲಾರಿಯ ಮುಂಭಾಗ ಜಖಂಗೊಂಡಿದ್ದು, ಚಾಲಕ ಹಾಗೂ ನಿರ್ವಾಹಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ದಿಢೀರನೆ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡೆದ ಅಪಘಾತವನ್ನು ಗಮನಿಸದೆ ನುಗ್ಗಿದ ಪರಿಣಾಮ ಇನ್ನೊಂದು ಅಪಘಾತವಾಗುವ ಘಟನೆ ತಪ್ಪಿದೆ. ಹಾಗೂ ಲಾರಿಯನ್ನು ತೆರವುಗೊಳಿಸುವಲ್ಲಿ ಖಾಸಗಿ ಬಸ್ ಅಡ್ಡಿಯುಂಟಾಗಿತ್ತು.
ಸತತ ಐದು ಗಂಟೆಗಳ ಕಾಲ ಸಂಚಾರ ಅರ್ಥವ್ಯಸ್ತಗೊಂಡಿದ್ದು, ತಾತ್ಕಾಲಿಕವಾಗಿ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿದ್ದವು. ಸ್ಥಳಕ್ಕೆ ಆಗಮಿಸಿದ ಆಯನೂರು ಪೊಲೀಸರು ಲಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…