Categories: Ripponpete

ವಲಯ ಮಟ್ಟದ ಕ್ರೀಡಾಕೂಟದಲ್ಲಿ ಗುಡ್‌ಶಫರ್ಡ್ ಶಾಲೆಗೆ ಸಮಗ್ರ ಪ್ರಶಸ್ತಿ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಗುಡ್‌ಶಫರ್ಡ್ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರೊಂದಿಗೆ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆಂದು ಶಾಲಾ ಎಸ್.ಡಿ.ಎಂ.ಸಿ ಸಮಿತಿಯವರು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

ಬಾಲಕರ ವಿಭಾಗದ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ರಿಲೇ 100 ಮೀಟರ್ ಓಟ, ಗುಂಡು ಎಸೆತ, ಎತ್ತರ ಜಿಗಿತ, ತಟ್ಟೆ ಎಸೆತ, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಗಳಿಸಿದರೆ, ವಿದ್ಯಾರ್ಥಿನಿಯ ವಿಭಾಗದಲ್ಲಿ ವಾಲಿಬಾಲ್ ಪ್ರಥಮ, ತಟ್ಟೆ ಎಸೆತ, 200 ಮೀಟರ್ ಓಟ, ರಿಲೇ 100 ಮೀಟರ್ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಗುಡ್‌ಶಫರ್ಡ್ ಚರ್ಚ್‌ನ ಧರ್ಮಗುರು ರೆ.ಪಾ.ಬಿನೋಯ್ ಮುಖ್ಯ ಶಿಕ್ಷಕಿ ಜ್ಯೋಸ್ಪಿನ್, ದೈಹಿಕ ಶಿಕ್ಷಕ ಸುರೇಶ್, ಗುಡ್‌ಶಫರ್ಡ್ ಶಾಲೆಯ ಪೋಷಕರು ಶಿಕ್ಷಕ ಸಮಿತಿಯ ಸಬಾಸ್ಟಿನ್, ಹಸನಬ್ಬ ಬ್ಯಾರಿ, ದಯಾನಂದ ಶಿಕ್ಷಕರಾದ ರಾಘವೇಂದ್ರ, ಮಂಜುನಾಥ, ಷಣ್ಮುಖ ಇತರರು ಹಾಜರಿದ್ದರು.

ಬೈರಾಪುರ ಕಿರುಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಕಿರುಮಂತ್ರಾಲಯವೆಂದೇ ಪ್ರಖ್ಯಾತಿ ಪಡೆದಿರುವ ಶ್ರೀರಾಘವೇಂದ್ರ ಸ್ವಾಮಿಮಠದಲ್ಲಿ ಆಗಸ್ಟ್ 31 ರಿಂದ ಸೆಷ್ಟಂಬರ್ 2 ರವರೆಗೆ ಶ್ರೀರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿ ಕೆ.ದೇವರಾಜ್ ಪತ್ರಿಕೆ ಪ್ರಕಟಣೆ ತಿಳಿಸಿದೆ.

ಆಗಸ್ಟ್ 31 ರಂದು `ಪೂರ್ವಾರಾಧನೆ.ವಿಶೇಷ ಪೂಜೆಗಳು ತೀರ್ಥಪ್ರಸಾದ ವಿನಿಯೋಗ, ಸೆ.1 ರಂದು ಶುಕ್ರವಾರ “ಆರಾಧನೆ’’ ವಿಶೇಷ ಪೂಜೆ ತೀರ್ಥಪ್ರಸಾದ ವಿನಿಯೋಗ, ಸಾಮೂಹಿಕ ಅನ್ನಸಂತರ್ಪಣೆ ಸೆ.2 ರಂದು ಉತ್ತರಾರಾಧಾನೆ ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗುರುಸಾರ್ವಭೌಮರ ದರ್ಶನಾಶೀರ್ವಾದ ಪಡೆಯುವಂತೆ ಮಠದ ಕಾರ್ಯದರ್ಶಿ ಕೆ.ದೇವರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago