Categories: Ripponpete

ವಿಘ್ನೇಶ್ವರನಿಗೆ ವಿಶೇಷ ಪೂಜೆಯೊಂದಿಗೆ ದರ್ಶನಾರ್ಶೀವಾದ ಪಡೆದ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಇಲ್ಲಿನ ಪುರಾಣ ಪ್ರಸಿದ್ದ ಸಿದ್ದಿವಿನಾಯಕ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರ 6ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಯಾವುದೇ ವಿಘ್ನಗಳು ಬಾರದೇ ನನ್ನ ಗೆಲುವು ಸುಲಲಿತವಾಗಲೆಂದು ವಿಘ್ನನಿವಾರಕನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ದರ್ಶನಾರ್ಶೀವಾದ ಪಡೆದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಅಭಿವೃದ್ದಿ ವಿಚಾರದಲ್ಲಿ ನಾತ ಮತಯಾಚಿಸುತ್ತೇನೆ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ವಿಧಾನಸೌಧದೊಳಗೆ ಮತ್ತು ಹೊರಗೆ ಪರಿಣಾಮಕಾರಿಯಾಗಿ ಧ್ವನಿ ಎತ್ತಿ ಚರ್ಚಿಸಲು ನನಗೆ ಈ ಬಾರಿಯಲ್ಲಿಯೂ ಆವಕಾಶ ಮಾಡಿಕೊಂಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಪಕ್ಷದ ಮುಖಂಡರಾದ
ಎನ್.ಸತೀಶ್, ಪಿ.ರಮೇಶ್, ಕೆ.ಬಿ.ಹೂವಪ್ಪ, ಮಂಜುಳಾ ಕಾತಾರ್ಜಿರಾವ್, ನಾಗರತ್ನ, ಸುಧೀಂದ್ರ ಪೂಜಾರಿ ಸುಂದರೇಶ್, ಅಲವಳ್ಳಿ ವೀರೇಶ್, ಸುರೇಶ್‌ಸಿಂಗ್, ರಾಮಚಂದ್ರ ಹರತಾಳು, ಕೃಷ್ಣೋಜಿರಾವ್, ದೇವರಾಜ್, ಮಂಜಪ್ಪ, ರಾಮು ಬಳೆಗಾರ ಪಕ್ಷದ ಹಲವು ಮುಖಂಡರು ಹಾಜರಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

5 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

8 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

8 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

13 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

15 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago