Categories: HosanagaraRipponpete

ವಿಜಯದಶಮಿ ಉತ್ಸವ | ವಿದ್ಯಾಭ್ಯಾಸ ಸಂಶೋಧನೆಗಳಿಂದ ಜ್ಞಾನಸಂಪತ್ತು ವರ್ಧಿಸಲಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ಸರ್ವತ್ರ ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಪ್ರತಿಯೋರ್ವರು ವಿದ್ಯಾವಂತರಾಗಿ, ಸದಾ ಅಧ್ಯಯನ ಶೀಲರಾಗಿ ಜ್ಞಾನಸಂಪತ್ತು ವರ್ಧಿಸುವಂತಾಗಲೆಂದು ಹೊಂಬುಜದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿಜಯದಶಮಿ ಸುದಿನದಂದು ಪ್ರವಚನದಲ್ಲಿ ತಿಳಿಸಿದರು.

‘ವಿಜಯಿ ಭವಿ’ ಎಂದು ಭಕ್ತರನ್ನು ಹರಸಿ, ಉತ್ತಮ ಬಾಳ್ವೆಯ ಕನಸು ನನಸಾಗಿ ಆಧ್ಯಾತ್ಮಿಕ ಚಿಂತನೆಯ ಶ್ರೀಫಲ ಎಲ್ಲೆಡೆ ದುಃಖ ಸಂಕಷ್ಟಗಳನ್ನು ಪರಿಹರಿಸಲೆಂದರು.

ಭಕ್ತರ ನಿರಂತರ ಸಹಕಾರ ಮಠದ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗಿದ್ದು, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಬಸದಿಯ ಜೀರ್ಣೋದ್ಧಾರ, ಕ್ಷೇತ್ರರಕ್ಷಕ ಶ್ರೀ ಕ್ಷೇತ್ರಪಾಲ ಸ್ವಾಮಿ ಬಸದಿ ಹಾಗೂ ಮಠದ ಆವರಣದಲ್ಲಿರುವ ಚಂದ್ರಶಾಲೆಯ ಜೀರ್ಣೋದ್ದಾರ ಕಾರ್ಯಗಳು ನಡೆದಿವೆ. ಈ ಹಿಂದೆ ಎಲ್ಲ ಕಾರ್ಯದಲ್ಲಿ ಭಕ್ತರ ಸಹಕಾರವನ್ನು ಸ್ಮರಿಸುತ್ತಾ ಮುಂದೆಯೂ ಎಲ್ಲರ ಸಹಕಾರವು ಹೀಗೆ ಮುಂದುವರೆಯಲಿ. ಜಗತ್ತಿನಲ್ಲಿ ಸುಖ-ಶಾಂತಿ-ಸಮೃದ್ಧಿ ವಾತಾವರಣ ಉಂಟಾಗಲಿ. ವಿಜಯದಶಮಿಯಂದು ಎಲ್ಲರೂ ಸತ್ಕಾರ್ಯವನ್ನು ಮಾಡಲು ಸಂಕಲ್ಪ ಮಾಡಬೇಕೆಂದು ಹರಸಿದರು.
ಐತಿಹಾಸಿಕ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ, ಶ್ರೀ ಕ್ಷೇತ್ರಪಾಲ ಸಹಿತ ಚತುಃರ್ವಿಂಶತಿ ತೀರ್ಥಂಕರರಿಗೆ ಆಗಮೋಕ್ತ ಪದ್ಧತಿಯಂತೆ ಪೂಜೆ, ಪ್ರಾರ್ಥನೆ ಸಮರ್ಪಿಸಲಾಯಿತು.

ಬನ್ನಿ ಮಂಟಪದಲ್ಲಿ ಶಮಿವೃಕ್ಷ ಪೂಜೆ :
ಪರಂಪರಾನುಗತವಾಗಿ ಆಚರಿಸುವ ಶಮೀ ವೃಕ್ಷ ಪೂಜೆಯನ್ನು ಶ್ರೀ ಕ್ಷೇತ್ರದ ಉತ್ಸವ ಮೂರ್ತಿಯ ಸಾನಿಧ್ಯದಲ್ಲಿ ಪೂಜ್ಯಶ್ರೀಗಳ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಶ್ರೀಕ್ಷೇತ್ರದಿಂದ ಬನ್ನಿ ಮಂಟಪದವರೆಗೆ ಸಾಲಂಕೃತ ಮೆರವಣಿಗೆಯಲ್ಲಿ ಐಶ್ವರ್ಯ ಆನೆ, ಮಾನವಿ ಕುದುರೆ ಸಹಿತ ವಾದ್ಯಗೋಷ್ಠಿಯೊಂದಿಗೆ ಊರಪರವೂರ ಭಕ್ತರು ವಿಜಯದಶಮಿ ಪ್ರಯುಕ್ತ ಶಮೀ ಪತ್ರಗಳನ್ನು ಶ್ರೀಗಳಿಂದ ಸ್ವೀಕರಿಸಿದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

7 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

8 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

8 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

9 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

12 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

14 hours ago