ರಿಪ್ಪನ್ಪೇಟೆ: ಸಮೀಪದ ಬರುವೆ (Baruve) ಬ್ರಹ್ಮದೇವರ (Brahma) ಜಾತ್ರಾ ಮಹೋತ್ಸವವು ಶ್ರದ್ದಾಭಕ್ತಿಯೊಂದಿಗೆ ವಿಜೃಂಭಣೆಯಿಂದ ಜರುಗಿತು.
ದೀಪಾವಳಿ D(eepavali) ಹಬ್ಬ ಮುಗಿದು ಒಂದೇ ವಾರದಲ್ಲಿ ಬರುವ ಬರುವೆ ಗ್ರಾಮದ ಬ್ರಹ್ಮ ದೇವರ ಜಾತ್ರಾ (Fair) ಮಹೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಹಲವರು ತಣ್ಣೀರಿನಲ್ಲಿ ಮುಳುಗಿ ಬ್ರಹ್ಮ ದೇವರ ಗದ್ದುಗೆ ಎದುರಿನಲ್ಲಿ ನಿಂತು ಪ್ರಾರ್ಥಿಸಿಕೊಳ್ಳುವುದರೊಂದಿಗೆ ಮುಂದಿನ ವರ್ಷದ ಬ್ರಹ್ಮ ದೇವರ ಪೊಜೆಯ ಒಳಗೆ ತಾವು ಮಾಡಿಕೊಂಡ ಹರಿಕೆ ಈಡೇರಿಸುವಂತೆ ಭಕ್ತಿಯಿಂದ ಪ್ರಾರ್ಥನೆ ಮಾಡಿಕೊಂಡರೇ ಹಲವರು ಕಳೆದ ವರ್ಷ ಮಾಡಿಕೊಂಡ ಹರಿಕೆ ಈಡೇರಿದೆ ಎಂದು ಹಣ್ಣು ಕಾಯಿಯೊಂದಿಗೆ ಭಕ್ತಿಯನ್ನು ಸಮರ್ಪಿಸಿದರು.
ಪೂಜೆಯ ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆಯೊಂದಿಗೆ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.
ರಿಪ್ಪನ್ಪೇಟೆ ಸೇರಿದಂತೆ ದೂರದ ಸಾಗರ, ತೀರ್ಥಹಳ್ಳಿ, ಶಿವಮೊಗ್ಗ, ಸೊರಬ, ಶಿಕಾರಿಪುರ ತಾಲ್ಲೂಕಿನ ಹಲವು ಗ್ರಾಮದ ಸಾವಿರಾರು ಸಂಖ್ಯೆಯ ಭಕ್ತರು ಭಾಗವಹಿಸಿ ದೇವರ ದರ್ಶನಾಶೀರ್ವಾದ ಪಡೆದರು.
ಬರುವೆ, ದೊಡ್ಡಿನಕೊಪ್ಪ, ಮುಡುಬ, ಬೈರಾಪುರ, ಮಳವಳ್ಳಿ, ಕಾನುಗೋಡು, ಗವಟೂರು, ಬೆನವಳ್ಳಿ, ಹಾಲುಗುಡ್ಡೆ ಕಲ್ಮಕ್ಕಿ, ಲಕ್ಕವಳ್ಳಿ, ಕೆರೆಹಳ್ಳಿ ಹೀಗೆ ಸುತ್ತಮುತ್ತಲಿನ ಭಕ್ತ ಸಮೂಹ ಭಾಗವಹಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…