Categories: Ripponpete

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ರಿಪ್ಪನ್‌ಪೇಟೆ: ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ವ್ಯಾಸಂಗ ಮಾಡುವುದರಿಂದಾಗಿ ಸರ್ಕಾರಿ ಶಾಲೆಗಳ ಉಳಿವಿಕೆಗೆ ಸಹಕಾರಿಯಾಗಿದೆ. ಸರ್ಕಾರದ ಉಚಿತ ಶಿಕ್ಷಣದಿಂದಾಗಿ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ಹೆಚ್ಚು ದಾಖಲಾಗಬೇಕು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಡೊನೇಷನ್ ನೀಡಿ ಮಕ್ಕಳಲ್ಲಿ ಹೆಚ್ಚಿನ ಹೊರೆ ಹೊರಿಸುವುದರ ಬದಲು ಮಕ್ಕಳ ಬೌದ್ದಿಕ ಬೆಳವಣಿಗಗೆ ಅನುಗುಣವಾಗಿ ಪಾಠ ಪ್ರವಚನ ನೀಡುವ ಸರ್ಕಾರಿ ಶಾಲೆಗಳೇ ಹೆಚ್ಚು ಉಪಯುಕ್ತವಾಗಿವೆ ಎಂದು ದಾನಿಯಾದ ಶಿವಮೊಗ್ಗದ ನ್ಯಾಯವಾದಿ ಕೆ.ವೈ.ರಾಮಚಂದ್ರಪ್ಪ ಕುಬಟಹಳ್ಳಿ ಹೇಳಿದರು.

ಸಮೀಪದ ಹುಂಚ ಹೊಂಡಲಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳಿಗೆ ಉಚಿತ ಸಮವಸ್ತ್ರ ಮತ್ತು ಟೈ, ಬೆಲ್ಟನ್ನು ವಿತರಿಸಿ ಮಾತನಾಡಿ, ಇಂದಿನ ಆಂಗ್ಲಭಾಷಾ ವ್ಯಾಮೂಹದಿಂದಾಗಿ ಮಕ್ಕಳು ಸರ್ಕಾರಿ ಶಾಲೆಯೆಂದರೆ ಮೂಗುಮುರಿಯುವ ಸ್ಥಿತಿಯಿದ್ದು ಸರ್ಕಾರ ಉಚಿತ ಶಿಕ್ಷಣ ವ್ಯವಸ್ಥೆಯ ಮೂಲಕ ಮಕ್ಕಳ ಬೆಳವಣಿಗೆಗೆ ಅನುಗುಣವಾಗಿ ಭೋದನೆ ಮಾಡುವುದರಿಂದಾಗಿ ಹೆಚ್ಚು ಪ್ರಗತಿ ಹೊಂದಲು ಸಹಕಾರಿಯಾಗಿದೆ ಎಂದರು.

ಈ ಸಮಾರಂಭದಲ್ಲಿ ಬಿಇಓ ಹೆಚ್.ಆರ್.ಕೃಷ್ಣಮೂರ್ತಿ, ಮುಖ್ಯಶಿಕ್ಷಕಿ ಗೀತಾ ಸಹಶಿಕ್ಷಕರಾದ ಕೆ.ಬಿ.ವಿಶ್ವನಾಥ, ಬಾಲಕೃಷ್ಣ, ಸಿಆರ್‌ಪಿ.ಎಂ.ದೀಪ, ಎಸ್.ಡಿ.ಎಂ.ಸಿ. ಸದಸ್ಯರು ಪಾಲ್ಗೊಂಡಿದ್ದರು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

3 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

4 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

15 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

17 hours ago