ರಿಪ್ಪನ್ಪೇಟೆ: ಈ ಹಿಂದಿನ ಸರ್ಕಾರ ಚುನಾವಣೆ ಮುಗಿಯುತ್ತಿದ್ದಂತೆ ಪ್ರತಿ ಯೂನಿಟ್ಗೆ 70 ಪೈಸೆ ಹೆಚ್ಚಳ ಮಾಡುವ ಪ್ರಸ್ತಾವನೆ ಘೋಷಿಸಿ ಮೇ 1 ರಿಂದ ಜಾರಿಯಾಗುತ್ತದೆಂದು ಹೇಳಲಾಗಿದ್ದು ನಂತರದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರ ಯೂನಿಟ್ಗೆ 70 ಪೈಸೆ ಹೆಚ್ಚಳದೊಂದಿಗೆ ಏಕಾಏಕಿ ಮಾಸಿಕ ಶುಲ್ಕ 110 ರೂ. ನಿಂದ 200 ರೂ.ಗೆ ಏರಿಸಿ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿದೆ ಎಂದು ಇಲ್ಲಿನ ಗ್ರಾಹಕರಾದ ಜಿ.ಕೆ.ಅನಂತಶಾಸ್ತ್ರಿ ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಪ್ರಣಾಳಿಕೆಯನ್ನು ಪ್ರಕಟಿಸಿದ್ದು ಈ ಪ್ರಣಾಳಿಕೆಯ ಅನುಷ್ಟಾನಕ್ಕಾಗಿ ಉಚಿತ ವಿದ್ಯುತ್ 200 ಯೂನಿಟ್ ನೀಡುವ ಉದ್ದೇಶದಿಂದಾಗಿ ಮೆಸ್ಕಾಂ ಕಮರ್ಷಿಯಲ್ ಗ್ರಾಹಕರಿಗೆ ಹಾಗೂ ಗೃಹ ಬಳಕೆ ಗ್ರಾಹಕರಿಗೆ ಏಕಾಏಕಿ ಯೂನಿಟ್ಗೆ 70 ಪೈಸೆ ಹೆಚ್ಚಳ ಹಾಗೂ ಮಾಸಿಕ ಶುಲ್ಕ 110 ಬದಲು 220 ರೂ. ಹೆಚ್ಚಳಗೊಳಿಸಿ ಹಗಲು ದರೋಡೆ ಮಾಡುತ್ತಿದ್ದೆ ಎಂದು ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.
ಮಹಿಳೆಯರಿಗೆ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರಿ ಬಸ್ ಸಂಚಾರ ಉಚಿತ, 200 ಯೂನಿಟ್ ವಿದ್ಯುತ್ ಉಚಿತ ಹೀಗೆ ಅಶ್ವಾಸನೆ ನೀಡಿ ಈಗ ಎಲ್ಲರ ಜೇಬಿಗೆ ಹಗಲೇ ಕನ್ನ
ಹಾಕುವ ಹುನ್ನಾರ ನಡೆಸಿದ್ದಂತಾಗಿದೆ ಎಂದು ಆರೋಪಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…