Categories: Ripponpete

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ?

ರಿಪ್ಪನ್‌ಪೇಟೆ: ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಆಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು.

ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ಕಳೆದ ಐದು ವರ್ಷದ ಅವಧಿಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾರ್ಯಗಳಿಗಾಗಿ 36 ಕೋಟಿ ರೂ. ಅನುದಾನವನ್ನು ತಂದಿರುವುದಾಗಿ ವಿವರಿಸಿ ಈ ಹಿಂದೆ 10 ವರ್ಷದ ಅವಧಿಯಲ್ಲಿ ಶಾಸಕರಾಗಿದ್ದವರು ಎಷ್ಟು ಅನುದಾನ ತಂದಿದ್ದಾರೆಂದು ಪ್ರಶ್ನಿಸಿ ಎಂದು ಹೇಳಿ ಈಗಾಗಲೇ ನಾನು ಚುನಾವಣೆಯ ಸಂದರ್ಭದಲ್ಲಿ ರಿಪ್ಪನ್‌ಪೇಟೆಯ ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದಿಂದ ತಲಾ ಒಂದು ಕಿ.ಮೀ. ಡಬಲ್ ರಸ್ತೆ ನಿರ್ಮಿಸುವ ಭರವಸೆ ನೀಡಿದ್ದು ಅದರಂತೆ ಸಾಗರ ರಸ್ತೆಯಲ್ಲಿ ಡಬಲ್ ರಸ್ತೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದು ಕಾಮಗಾರಿ ಸಹ ಆರಂಭವಾಗಿದೆ ಉಳಿದ ಇನ್ನೂ ಮೂರು ರಸ್ತೆಗಳನ್ನು ಮುಂಬರುವ ದಿನಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಸರ್ಕಾರದಿಂದ ಅನುದಾನ ತರುವುದರೊಂದಿಗೆ ಪಳಪಳ ಹೊಳೆಯುವಂತೆ ಮಾಡಲು ನನಗೆ ಮತ ನೀಡಿ ಎಂದು ಮನವಿ ಮಾಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಬಗರ್‌ಹುಕುಂ ಸಾಗುವಳಿ ರೈತರ ಸಮಸ್ಯೆಗೆ ಶಾಸನ ಸಭೆಯ ಒಳಗೆ ಮತ್ತು ಹೊರಗೆ ಹೋರಾಟ ಮಾಡುವುದರೊಂದಿಗೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುವವರ ಪರ ಕಾಗೋಡು ಹೋರಾಟದಂತೆ ಉಳುವವನೆ ಹೊಲದೊಡೆಯ ತತ್ವ ಸಿದ್ದಾಂತದಂತೆ ಹೋರಾಟ ನಡೆಸಿ ಶಾಶ್ವತ ಪರಿಹಾಕ ಕೊಡಿಸಲು ನನಗೆ ಈ ಭಾರಿ ಮತ ಕೊಡಿ ಎಂದ ಹೇಳಿ ಬಿಜೆಪಿ ಬಡವರ ದೀನದಲಿತ ಪರವಾದ ಪಕ್ಷವಾಗಿದೆ ಬಿ.ಎಸ್.ಯಡಿಯೂರಪ್ಪನವರ ಕನಸು ನನಸು ಮಾಡಲು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದರು.

ಹೊಸನಗರ ತಾಲ್ಲೂಕಿನ ವೀರಶೈವ ಸಮಾಜಕ್ಕೆ 8 ಕೋಟಿ ರೂ. ನಾರಾಯಣಗುರು ಮಠಕ್ಕೆ 10 ಕೋಟಿ ರೂ. ಹಾಗೂ 600 ಕ್ಕೂ ಅಧಿಕ ದೇವಸ್ಥಾನಗಳ ಅಭಿವೃದ್ದಿ ಹಾಗೂ 880 ಕೋಟಿ ರೂ. ಗ್ರಾಮೀಣ ರಸ್ತೆಗಳಿಗೆ ಹಾಗೂ ಸೇತುವೆ ಕಾಲುಸಂಕ ಹೀಗೆ ಹಲವು ಅಭಿವೃದ್ದಿ ಕಾರ್ಯಗಳಿಗೆ ಜಾತಿ ಬೇದ ಭಾವ ತೊರದೆ ಎಲ್ಲರಿಗೂ ಸಮಾನತೆ ನೀಡಿ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಸಭೆಯಲ್ಲಿ ವಿವರಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಅಭ್ಯರ್ಥಿ ಪರ ಮತಯಾಚಿಸಿ, ಸಾಗರ ಕ್ಷೇತ್ರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹರತಾಳು ಹಾಲಪ್ಪ ಶ್ರಮಿಸಿದ್ದಾರೆ. ಈ ಭಾರಿಯಲ್ಲಿ ಅವರನ್ನು ಗೆಲಿಸುವುದರಿಂದ ಇನ್ನೂ ಹೆಚ್ಚಿನ ಅಭಿವೃದ್ದಿಯಾಗುವುದರೊಂದಿಗೆ ಬಗರ್ ಹುಕುಂ ಸಮಸ್ಯೆ ಅರಣ್ಯ ಒತ್ತುವರಿದಾರರ ಸಮಸ್ಯೆಗೆ ಶಾಸನ ಸಭೆಯಲ್ಲಿ ಧ್ವನಿ ಎತ್ತುವುದರೊಂದಿಗೆ ಶಾಶ್ವತ ಪರಿಹಾರ ಕಲ್ಪಿಸುವರೆಂದು ಹೇಳಿ ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಚಿಹ್ನೆಗೆ ಮತ ನೀಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಪಂ ಮಾಜಿ ಸದಸ್ಯೆ ಎ.ಟಿ.ನಾಗರತ್ನಮ್ಮ, ಸುರೇಶ್‌ಸ್ವಾಮಿರಾವ್, ಬಿಜೆಪಿ ಮುಖಂಡರಾದ ಡಾ.ರಾಜಾನಂದಿನಿ, ತಲ್ಲೂರು ರಾಜು, ಕೆರೆಕೈ ಪ್ರಸನ್ನ, ಗಣಪತಿ ಬಿಳಗೋಡು, ಎಂ.ಬಿ.ಮಂಜುನಾಥ, ಮಂಜುಳಾ ಕೇತಾರ್ಜಿರಾವ್, ಬಿ.ಯುವರಾಜ್, ವೀರೇಶ್‌ ಆಲವಳ್ಳಿ, ಬೆಳ್ಳೂರು ತಿಮ್ಮಪ್ಪ, ಹೊನಗೋಡು ರತ್ನಾಕರ್, ಸುರೇಶ್‌ಸಿಂಗ್ ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.

ಬೈಕ್ ರ‍್ಯಾಲಿ :
ಬಹಿರಂಗ ಸಭೆಗೂ ಮುನ್ನ ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿಯಿಂದ ಸಾವಿರಾರು ಬೈಕ್‌ಗಳಲ್ಲಿ ಕಾರ್ಯಕರ್ತರು ನಾಲ್ಕು ರಸ್ತೆಯಲ್ಲಿ ಬೈಕ್ ರ‍್ಯಾಲಿ ನಡೆಸಿದರು.

Malnad Times

Recent Posts

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

47 mins ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…

1 hour ago

Rain Alert | ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…

7 hours ago

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

17 hours ago

ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

18 hours ago

ಮೇ 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…

20 hours ago