ರಿಪ್ಪನ್ಪೇಟೆ: ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮೆಕ್ಕಾ ಮಸೀದಿ ಹಾಗೂ ಗಾಳಿಬೈಲು ಜುಮ್ಮಾ ಮಸೀದಿ ಮುಸ್ಲಿಂ ಬಾಂಧವರು ಶ್ರದ್ದಾ ಭಕ್ತಿಯೊಂದಿಗೆ ಬಕ್ರೀದ್ ಹಬ್ಬವನ್ನು ಆಚರಿಸಿದರು.
ಮೊಹಿಯುದ್ದೀನ್ ಜುಮ್ಮಾ ಮಸೀದಿ ಮೆಕ್ಕಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಅಂಗವಾಗಿ ಮತ್ತು ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು ನಂತರ ಧರ್ಮಗುರು ಮುನೀರ್ ಸಖಾಫಿ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು. ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಶ್ರದ್ದಾಭಕ್ತಿಯಿಂದ ಆಚರಿಸುವುದು ಮುಖ್ಯವಾಗಿದೆ. ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಧರ್ಮ ಖಂಡಿಸುತ್ತದೆ ಎಂದರು.
ಮಳೆಯ ಹಿನ್ನೆಲೆಯಲ್ಲಿ ಮೆರವಣಿಗೆಯನ್ನು ರದ್ದುಗೊಳಿಸಿ ಮುಸ್ಲಿಂ ಬಾಂಧವರು ಗುಂಪು ಗುಂಪಾಗಿ ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯಗಳನ್ನು ವಿನಮಯ ಮಾಡಿಕೊಂಡರು.
ಗಾಳಿಬೈಲು ಗ್ರಾಮದ ಜುಮ್ಮಾ ಮಸೀದಿ ಮುಸ್ಲಿಂ ಬಾಂಧವರು ಗಾಳಿಬೈಲು ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ರಿಪ್ಪನ್ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆಧ್ಯಕ್ಷರಾದ ಮಹಮ್ಮದ್ ರಫಿ,ಕಾರ್ಯದರ್ಶಿ ಶಫಿವುಲ್ಲಾ,ಮುಖಂಡರಾದ ಆರ್.ಎ.ಚಾಬುಸಾಬ್, ಅಮ್ಮೀರಹಂಜಾ, ಶಂಶುದ್ದೀನ್, ಕೆ.ಹೆಚ್.ಆರ್.ಮೋಣು, ಫಾಜಿಲ್, ಮುಸ್ತಾಫ್, ಅಬ್ದುಲ್ಖುದ್ದೂಸ್, ಹಸನಬ್ಬ, ರೆಹಮಾನ್, ಸದೀಮ್, ನಾಸೀರ್, ಎಂ.ಹೆಚ್. ಮುಸ್ತಾಫ್, ಗಾಳಿಬೈಲು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಅಖಿಲ್ ಅಹಮ್ಮದ್ ರಝಾ, ಅಧ್ಯಕ್ಷರಾದ ಜಿ.ಕೆ.ಜಾವಿದ್, ಮಹಮ್ಮದ ಷರೀಫ್ಸಾಬ್, ಘನಿಸಾಬ್, ವಜೀರ್ಸಾಬ್, ಉಬೇದುಲ್ಲಾ ಷರೀಫ್, ಸೈಪುಲ್ಲಾ, ಹಿದಾಯತ್, ಶಬ್ಬೀರ್ಸಾಬ್, ಖಲೀಲ್ ಷರೀಫ್ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…