Categories: Ripponpete

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು, ಚುಚ್ಚು ಮದ್ದಿಲ್ಲದೆ ರೋಗಿಗಳ ಪರದಾಟ ; ಇದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ, ವ್ಯಥೆ

ರಿಪ್ಪನ್‌ಪೇಟೆ: ಜಾನುವಾರುಗಳ್ನು ಹೊಡೆಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನರಳಾಟ, ನಾಯಿ ಕಚ್ಚಿದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು, ಇನ್ನೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವವರ‍್ಯಾರು ಎನ್ನುವಂತಾಗಿದೆ.

ಆಸ್ಪತ್ರೆಗೆ ಜಾನುವಾರು ಹೊಡೆಯಲು ಹೋದ ಯುವತಿಯೊಬ್ಬಕು ನಿನ್ನೆ ಬೆಳಗ್ಗೆ 10 ಗಂಟೆ ಸಮಯದಲ್ಲಿ ಬಿದ್ದು ಬಲಭಾಗದ ತೊಡೆ ತೀವ್ರ ಗಾಯಗೊಂಡಿದ್ದು ಕಾಲಿನಲ್ಲಿ ರಕ್ತ ಸುರಿಯುತ್ತಿದ್ದರೂ ಕೂಡಾ ಆಸ್ಪತ್ರೆಯ ಸಿಬ್ಬಂದಿಗಳು ವೈದ್ಯರಿಲ್ಲ ಎಂದು ಪ್ರಥಮ ಚಿಕಿತ್ಸೆ ನೀಡದೇ ನಿರ್ಲಕ್ಷ್ಯದಿಂದ ನೋಡಿಕೊಂಡು ಓಡಾಡುತ್ತಿದ್ದರು. ಅಲ್ಲದೇ ನಾಯಿ ಕಚ್ಚಿದ ಮಹಿಳೆಯೊಬ್ಬರು ಟಿಟಿ ಚುಚ್ಚು ಮದ್ದು ಪಡೆಯಲು ಹೋದರೆ ನಮ್ಮಲ್ಲಿ ಟಿಟಿ ಇಂಜೆಕ್ಷನ್ ಇಲ್ಲ ಖಾಸಗಿ ಮೆಡಿಕಲ್‌ಗೆ ಚೀಟಿ ಕೊಟ್ಟು ತರುವಂತೆ ಕಳುಹಿಸಿದ ಪ್ರಸಂಗ ಸಹ ನಡೆಯುತ್ತಿದ್ದು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಸರಿಯಾದ ಸಮಯಕ್ಕೆ ವ್ಯೆದ್ಯಾಧಿಕಾರಿಗಳು ಹಾಜರಾಗದೇ ಇರುವುದರಿಂದ ಈ ಆಸ್ಪತ್ರೆ ಆನಾಥವಾಗುವಂತಾಗಿದೆ.

ಸುತ್ತಮುತ್ತ 76 ಹಳ್ಳಿಗಳು ಈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಒಳಪಡುತ್ತಿದ್ದ ಸುಮಾರು 45 ಸಾವಿರ ಜನಸಂಖ್ಯೆಯನ್ನು ಹೊಂದಿದ್ದು ಅರಸಾಳು, ಕೆಂಚನಾಲ, ಬೆಳ್ಳೂರು, ಹೆದ್ದಾರಿಪುರ, ಅಮೃತ, ಚಿಕ್ಕಜೇನಿ, ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಗೋಡು ತಿಮ್ಮಪ್ಪ ಹರತಾಳು ಹಾಲಪ್ಪ ಹೀಗೆ ಇಬ್ಬರು ಪ್ರಮುಖ ರಾಜಕೀಯ ನಾಯಕರು ಆಯ್ಕೆಯಾಗಿ ಬಂದರು ಈ ಸರ್ಕಾರಿ ಆಸ್ಪತ್ರೆಗೆ ಕಾಯಕಲ್ಪ ದೊರಕಿಸುವಲ್ಲಿ ಸಂಪೂರ್ಣ ವಿಫರಾಗಿದ್ದಾರೆ.
ಇಲ್ಲಿನ ಸರ್ಕಾರಿ ಅಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ದ ಪ್ರತಿಭಟನೆಗಳು ಹೋರಾಟಗಳು ನಡೆಸಲಾದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಈ ವೈದ್ಯಾಧಿಕಾರಿ ಬದಲಾಯಿಸಿದರೆ ಈ ಊರಿಗೆ ಡಾಕ್ಟರ್‌ಗಳು ಬರಲು ಸುತರಾಂ ಒಪ್ಪುವುದಿಲ್ಲ ನೀವು ಯಾರಾದರೂ ಡಾಕ್ಟರ್ ಬರುತ್ತಾರೆಂದು ಹೇಳಿದರೆ ನಾನು ಇರುವ ವೈದ್ಯಾಧಿಕಾರಿಯನ್ನು ಬದಲಾಯಿಸುತ್ತೇವೆಂದು ಇಬ್ಬರು ಜನನಾಯಕರು ದೂರು ನೀಡಲು ಹೋದವರಿಗೆ ಸಮಜಾಯಿಸಿ ನೀಡಿ ಕಳುಹಿಸಿದ್ದಾರೆ ಹಾಗಾದರೆ ಇರುವ ವೈದ್ಯಾಧಿಕಾರಿಗಳಿಗೆ ಲಂಗು ಲಗಾಮು ಇಲ್ಲದೇ ಎಷ್ಟು ಹೊತ್ತಿಗೆ ಬರುವುದು, ಹೋಗುವುದಾದರೆ ಈ ಭಾಗದ ಅನಾರೋಗ್ಯ ಪೀಡಿತರ ಮತ್ತು ರೋಗಿಗಳ ಹಾಗೂ ತುರ್ತು ಸಂದರ್ಭದಲ್ಲಿ ಏನಾದರೂ ಅವಘಡಗಳು ಸಂಭವಿಸಿದರೆ ಏನು ಗತಿಯೆಂದರೆ ದೇವರೇ ಗತಿಯನ್ನುವಂತಾಗಿದೆ.

ಇನ್ನಾದರೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮಹರಿಸಿ ತಕ್ಷಣ ಮಲೆನಾಡಿನ ರೈತನಾಗರೀಕರ ತುರ್ತು ಸೇವೆಗೆ ಸ್ಪಂದಿಸುವರೇ ಕಾದುನೋಡುವಂತಾಗಿದೆ. ಅಲ್ಲದೆ ಔಷಧಿ ಚುರ್ಚುಮದ್ದಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದರೊಂದಿಗೆ ಫಾರ್ಮಸಿಗಳು ಸಹ ಈ ಆಸ್ಪತ್ರೆಗೆ ನಿಯೋಜತರಾಗಿದ್ದು ವಾರದ ಮೂರು ದಿನ ಎಂದು ಹೇಳಿಕೊಂಡು ಸಮಯಕ್ಕೆ ಸರಿಯಾಗಿ ಹಾಜರಾಗದೇ ಬೇಕಾಬಿಟ್ಟಿ ಬಂದು ಹೋಗುವುದರಿಂದಾಗಿ ಸಕಾಲದಲ್ಲಿ ಔಷಧಿಗಳು ಮಾತ್ರೆಗಳು ಚುರ್ಚುಮದ್ದುಗಳು ಇಲ್ಲದೇ ಖಾಸಗಿ ಆಸ್ಪತ್ರೆಗಳಿಗೆ ಅಲೆಯುವಂತಾಗಿದೆ ಎಂದು ತಮ್ಮ ಅಸಹಾಯಕತೆಯನ್ನು ಸಂಯುಕ್ತಕರ್ನಾಟಕದ ಮುಂದೆ ರೋಗಿಗಳು ಹಂಚಿಕೊಂಡರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

2 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

3 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

3 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

5 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

7 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

9 hours ago