Categories: Ripponpete

ಸಮಾನತೆಗಾಗಿ ಬೈಕ್‌ನಲ್ಲಿ ದೇಶ ಸುತ್ತಲು ಹೊರಟ ರಿಪ್ಪನ್‌ಪೇಟೆಯ ಯುವಕ !

ರಿಪ್ಪನ್‌ಪೇಟೆ: ದೇಶ ಸುತ್ತಬೇಕು, ಕೋಶ ಓದಬೇಕು ಎಂಬ ಮಾತಿದೆ. ಮಲೆನಾಡಿನ ಯುವಕ ವಿಜೂ ವರ್ಗಿಸ್ ಅವರೀಗ ದೇಶ ಸುತ್ತಲು ಹೊರಟಿದ್ದಾರೆ.

ಇವರು ರಿಪ್ಪನ್‌ಪೇಟೆಯ ಸಮೀಪದ ಕೆಂಚನಾಲದವರು. ಏಕಾಂಗಿಯಾಗಿ ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಪ್ರವಾಸ ಹೋಗುವುದು ಇವರ ಹವ್ಯಾಸ. ಈ ಹವ್ಯಾಸಕ್ಕಾಗಿ ವಿಜೂ ಈಗ ಭಾರತ ಮಾತ್ರವಲ್ಲ, ನೇಪಾಳ ಹಾಗೂ ಭೂತಾನ್ ದೇಶಕ್ಕೆ ಭೇಟಿ ಕೊಡಲು ಹೊರಟಿದ್ದಾರೆ.

ವಿಜೂ ವರ್ಗೀಸ್ ಅವರು ಬೈಕ್‌ನಲ್ಲಿ ಏಕಾಂಗಿಯಾಗಿ ಪರ್ಯಾಟನೆಗೆ ಸುಮ್ಮನೆ ಹೊರಟಿಲ್ಲ. ರಕ್ತದಾನದ ಬಗ್ಗೆ ಅರಿವು, ದೇಶದಲ್ಲಿ ಎಲ್ಲರೂ ಸಮಾನರು, ಎಲ್ಲಾ ಜಾತಿ, ಧರ್ಮ ಒಂದೇ ಎಂಬ ಸಂದೇಶ ಹೊತ್ತು ಸಾಗುತ್ತಿದ್ದಾರೆ. ಬೈಕ್‌ನಲ್ಲಿಯೇ 60ಕ್ಕೂ ಹೆಚ್ಚು ದಿನಗಳ‌ ಕಾಲ ಪರ್ಯಟನೆಗೆ ಹೊರಟಿದ್ದು, ಪ್ರತಿದಿನ ಕನಿಷ್ಟ 350 ರಿಂದ 400 ಕಿ.ಮೀ ಪ್ರಯಾಣಿಸುವ ಗುರಿ ಹೊಂದಿದ್ದಾರೆ.

ಇವರು ಹುಟ್ಟೂರಿನಿಂದ ಹೊರಟು ಮೊದಲು ತೆಲಂಗಾಣಕ್ಕೆ ತೆರಳಲಿದ್ದಾರೆ. ತೆಲಂಗಾಣದಿಂದ ಬೆಂಗಳೂರಿಗೆ ವಾಪಸ್ ಆಗುವರು. ಇಲ್ಲಿಂದ ಚೆನೈ, ಪಾಂಡಿಚೇರಿ, ಧನುಷ್ಕೋಡಿ, ಕನ್ಯಾಕುಮಾರಿ, ಕೇರಳ, ಮಂಗಳೂರು, ಉಡುಪಿ, ಕಾರವಾರದ ಮೂಲಕ ಗೋವಾ ರಾಜ್ಯ ಪ್ರವೇಶಿಸಿ ಅಲ್ಲಿಂದ ಮಹಾರಾಷ್ಟದ ಮೂಲಕ ರಾಜಸ್ಥಾನ, ಗುಜರಾತ್, ಹರಿಯಾಣ, ದೆಹಲಿ, ಕಾಶ್ಮೀರ, ಉತ್ತರಾಖಂಡ್ ಮಾರ್ಗವಾಗಿ ನೇಪಾಳ ಪ್ರವೇಶಿಸುವರು. ಬಳಿಕ ಭೂತಾನ್‌ನಿಂದ ಅಸ್ಸಾಂ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರದ ಮೂಲಕ ಕರ್ನಾಟಕಕ್ಕೆ ಮರಳಲಿದ್ದಾರೆ.

ವಿಶೇಷವೆಂದರೆ, ದೇಶ ಸುತ್ತುವುದರೊಂದಿಗೆ ಪ್ರತಿ ರಾಜ್ಯದ ಮಣ್ಣನ್ನೂ ಇವರು ಸಂಗ್ರಹಿಸಲಿದ್ದಾರೆ. ಇದಕ್ಕಾಗಿ ಒಂದೊಂದು ಬಾಟಲಿ ಇಟ್ಟುಕೊಳ್ಳುವರು. ಈ ಮಣ್ಣನ್ನು ದೇಶದ ಪ್ರಸಿದ್ಧ ವ್ಯಕ್ತಿಗಳಿಗೆ ಉಡುಗೊರೆಯಾಗಿ ನೀಡುವ ಉದ್ದೇಶ ಹೊಂದಿದ್ದಾರೆ. ಅಂತಿಮವಾಗಿ ಮನುಷ್ಯ ಸತ್ತ ಮೇಲೆ ಹೋಗುವುದು‌ ಮಣ್ಣಿಗೆ ಎಂಬುದೇ ಇದರ ಉದ್ದೇಶ ಎಂದು ಅವರು ತಿಳಿಸಿದರು.

ವಿಜೂ ವರ್ಗಿಸ್ ಅವರಿಗೆ ದೇಶ ಸುತ್ತಲು ಸಾಥ್ ನೀಡುತ್ತಿರುವುದು ರಾಯಲ್ ಎನ್‌ಫೀಲ್ಡ್ ಬೈಕ್. ಈ ಬೈಕ್ ಅನ್ನು ದೂರ ಪ್ರಯಾಣಕ್ಕೆ ಬೇಕಾದಂತೆ ಅಣಿಗೊಳಿಸಿದ್ದಾರೆ. ಸಂಚಾರಕ್ಕೆ ಬೇಕಾದ ಪೆಟ್ರೋಲ್ ತುಂಬಲು ಎರಡು ಪ್ರತ್ಯೇಕ ಕ್ಯಾನ್ ಗಳು, ಲಗೇಜ್‌ಗಾಗಿ ಪ್ರತ್ಯೇಕ ಬಾಕ್ಸ್ ಸೇರಿದಂತೆ ಮಣ್ಣು ಸಂಗ್ರಹಿಸಿಡಲು ದೊಡ್ಡ ಬಾಕ್ಸ್ ಫಿಟ್ ಮಾಡಿದ್ದಾರೆ. ಕ್ಯಾಮರಾ ಅಳವಡಿಕೆ, ಮೊಬೈಲ್‌ ಇಟ್ಟುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಬೈಕ್‌ನ ಎರಡು ಟೈಯರ್‌ಗಳ ಹವಾ ತಿಳಿಯುವ ಡಿಜಿಟಲ್ ವ್ಯವಸ್ಥೆ ಇದೆ. ಬೈಕ್‌ಗೆ ಕೂಲರ್ ಅಳವಡಿಸಲಾಗಿದೆ. ಗೇರ್ ಅನ್ನು ಬಲಭಾಗದಿಂದ ಎಡ ಭಾಗಕ್ಕೆ ಬದಲಾಯಿಸಿ‌ ಕೊಡಲಾಗಿದೆ. ವಿಜೂ ವರ್ಗಿಸ್ ಕಳೆದ 9 ವರ್ಷದ ಹಿಂದೆ ಏಕಾಂಗಿಯಾಗಿ ದಕ್ಷಿಣ ಭಾರತ ಸುತ್ತಿ ಯಶಸ್ವಿಯಾಗಿದ್ದರು.

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

47 mins ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

2 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

3 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

5 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

18 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

18 hours ago