ರಿಪ್ಪನ್ಪೇಟೆ: ಸರ್ವರ್ ತಾಂತ್ರಿಕ ದೋಷದ ಕಾರಣ ರಾಜ್ಯದಲ್ಲಿ ಜೂ. 28 ರಿಂದ ಪಡಿತರ ವಿತರಣೆ ಇರುವುದಿಲ್ಲ ಎಂದು ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಜೂನ್ ತಿಂಗಳ ಪಡಿತರ ಹಂಚಿಕೆ ಕಾರ್ಯವನ್ನು ಜೂ. 27ಕ್ಕೆ ಕೊನೆಗೊಳಿಸುವಂತೆ ಅಧಿಕೃತ ಆದೇಶ ಹೊರಡಿಸಲಾಗಿದ್ದು ಆದರೆ ಹೊಸನಗರ ತಾಲ್ಲೂಕಿನಲ್ಲಿ ಜೂನ್ 20 ರಿಂದಲೇ ಸರ್ವರ್ ಸಮಸ್ಯೆ ತಲೆದೋರಿದ್ದು ಪಡಿತರದಾರರ ಪರದಾಟ ಹೇಳತೀರದಾಗಿದೆ.
ಕೋಡೂರು, ರಿಪ್ಪನ್ಪೇಟೆ, ಬೆಳ್ಳೂರು ಇನ್ನಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ನಿತ್ಯ ಸರತಿ ಸಾಲಿನಲ್ಲಿ ನಿಂತು ಬಸವಳಿಯವಂತಾಗಿ ಇಂದು ಕೊನೆ ದಿನವಾದ ಸಹನೆಯಿಂದಿದ್ದ ಫಲಾನುಭವಿಗಳ ಸಹನೆಯ ಕಟ್ಟೆ ಒಡೆದು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ್ಯಾಯಬೆಲೆ ಅಂಗಡಿಗಳ ಬಳಿ ನಡೆಯಿತು.
ಈ ಬಗ್ಗೆ ಪಡಿತರ ಫಲಾನುಭವಿಯೊಬ್ಬರು ಮಾಧ್ಯಮದವರ ಬಳಿ ಮಾತನಾಡಿ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಸರ್ವರ್ ಸಮಸ್ಯೆಯನ್ನು ಮುಂದಿಟ್ಟುಕೊಂಡು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ತೊಂದರೆ ಕೊಡುವುದೇ ಗುರಿಯನ್ನಾಗಿಸಿಕೊಂಡಿದ್ದಾರೆ. ಜೂನ್ 28 ರಿಂದ ಸರ್ವರ್ ದುರಸ್ಥಿ ಕಾರ್ಯಕೈಗೊಳ್ಳುವುದಾಗಿ ಆದೇಶ ಹೊರಡಿಸಲಾಗಿದ್ದರೂ ಕೂಡಾ ನಮ್ಮ ತಾಲ್ಲೂಕಿನಲ್ಲಿ ಜೂನ್ 10 ರಿಂದಲೇ ಈ ರೀತಿಯ ಸರ್ವರ್ ಸಮಸ್ಯೆ ಎದುರಿಸಬೇಕಾಗಿದೆ. ಜೂ. ತಿಂಗಳ ಪಡಿತರ ಪಡೆಯಲು ಈಗಾಗಲೇ ನಾಲ್ಕೈದು ಬಾರಿ ಅಂಗಡಿಗೆ ಅಲೆದು ಅಲೆದು ಸಾಕಾಗಿ ಹೋಗಿದೆ ಎಂದು ಆಕ್ರೋಶ ಹೊರಹಾಕಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…