ರಿಪ್ಪನ್ಪೇಟೆ: ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ. ಸಾಲ ಮಾಡಿ ತೀರುವಳಿ ಮಾಡಲಾಗದೆ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ.
ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು, ಮೃತನಿಗೆ ಪತ್ನಿ, ಓರ್ವ ಪುತ್ರ ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ.
ಕೆನರಾ ಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ ನೋಟಿಸ್ ನೀಡಲಾಗಿದ್ದು ಇದರಿಂದಾಗಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಅರಸಾಳು ಕೆನರಾ ಬ್ಯಾಂಕ್ ಮತ್ತು ಕೃಷಿ ಸೇವಾ ಸಹಕಾರ ಬ್ಯಾಂಕ್ ಮತ್ತು ಕೋಣಂದೂರು ಸೆಂಟ್ ಮಿಲಾಗ್ರಿಸ್ ಬ್ಯಾಂಕ್ಗಳಲ್ಲಿ ಬೆಳೆಯ ಮೇಲೆ ಸಾಲ ಮಾಡಿದ್ದರು ಎಂದು ಹೇಳಲಾಗಿದೆ.
ಪತ್ನಿ ನೀಡಿದ ದೂರಿನನ್ವಯ ರಿಪ್ಪನ್ಪೇಟೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಎಸ್.ಪಿ.ಪ್ರವೀಣ್ ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…