Categories: Ripponpete

ಸುದೀರ್ಘ 33 ವರ್ಷ ಗ್ರಾ.ಪಂ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸಿದ ಅಣ್ಣಪ್ಪನವರಿಗೆ ಭಾವನಾತ್ಮಕ ಬೀಳ್ಕೊಡುಗೆ

ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ ಅಟೆಂಡರ್ ಆಗಿ ಸುದೀರ್ಘ 33 ವರ್ಷ ಕಾರ್ಯನಿರ್ವಹಿಸಿ ವಯೋನಿವೃತ್ತರಾದ ಅಣ್ಣಪ್ಪ ಅವರನ್ನು ಗ್ರಾಮ ಪಂಚಾಯತ್ ವತಿಯಿಂದ ಶುಕ್ರವಾರ ಸನ್ಮಾನಿಸಿ ಭಾವನಾತ್ಮಕವಾಗಿ ಬೀಳ್ಕೊಡಲಾಯಿತು.

ಈ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಜಿ.ಪಂ. ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಅಣ್ಣಪ್ಪ ಸರ್ಕಾರಿ ಸೇವೆಯನ್ನು ಸಮಾಜ ಸೇವೆ ಎನ್ನುವ ನಿಟ್ಟಿನಲ್ಲಿ, ತಮ್ಮ ಸೇವೆಯನ್ನು ಸಾರ್ಥಕತೆಯಿಂದ ಪೂರೈಸಿದ್ದಾರೆ. ಅವರು ಅತ್ಯಂತ ಸರಳವಾಗಿ, ಎಲ್ಲರೊಂದಿಗೂ ಆತ್ಮೀಯತೆಯಿಂದ ಇದ್ದು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಕರ್ತವ್ಯದ ಶೈಲಿ ಇತರೆ ಸಿಬ್ಬಂದಿಗಳಿಗೆ ಮಾದರಿಯಾಗುವಂತಾಗಿದೆ ಎಂದರು.

ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಮಾತನಾಡಿ, ಅಣ್ಣಪ್ಪ ಅವರು ಸೇವಾ ಕಾರ್ಯದ ತಾತ್ಪರತೆ ಅನುಕರಣೀಯವಾದದ್ದು. ಇಂತವರು ಸೇವೆಯಲ್ಲಿದ್ದರೇ ನಿಜವಾದ ಸೇವೆಯು ಸಾರ್ವಜನಿಕರಿಗೆ ದೊರೆಯುತ್ತದೆ ಎನ್ನುವುದನ್ನು ಅವರು ತೋರಿಸಿ ಕೊಟ್ಟಿದ್ದಾರೆ ಎಂದು ಅವರ ಸೇವೆಯನ್ನು ನೆನೆದು ಭಾವುಕರಾದರು.

ಪಿಡಿಒ ನಾಗರಾಜ್ ಮಾತನಾಡಿ, ಅಣ್ಣಪ್ಪ ಅವರು ತಮ್ಮ ವೃತ್ತಿ ಜೀವನದೂದ್ದಕ್ಕೂ ಅತ್ಯಂತ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಎಲ್ಲರ ಹೆಮ್ಮೆಗೆ ಪಾತ್ರರಾದವರಾಗಿದ್ದಾರೆ. ಇಂತಹ ಸಿಬ್ಬಂದಿಯನ್ನು ನಾವು ಸೇವೆಯಿಂದ ದೂರ ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ತಾ.ಪಂ ಮಾಜಿ ಸದಸ್ಯ ಚಂದ್ರಮೌಳಿ ಹಾಗೂ ಗ್ರಾ.ಪಂ.ನ ಹಾಲಿ, ಮಾಜಿ ಅಧ್ಯಕ್ಷರು ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ನಾಗರೀಕರು ಮಾತನಾಡಿ, ಅಣ್ಣಪ್ಪ ಅವರ ಕರ್ತವ್ಯ ಪ್ರಜ್ಞೆಯನ್ನು ಶ್ಲಾಘಿಸಿದರು.

ಅಣ್ಣಪ್ಪ ಅವರಿಗೆ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಶಾಲು ಹೊದಿಸಿ, ಚಿನ್ನದ ಉಂಗುರ ತೊಡಿಸಿ ಸನ್ಮಾನಿಸಲಾಯಿತು. ಇನ್ನೂ ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸದಸ್ಯರುಗಳು ಅಣ್ಣಪ್ಪ ಅವರಿಗೆ ಸನ್ಮಾನಿಸಿ, ಹಣ ಸಂಗ್ರಹಿಸಿ ಅವರ ಹೆಸರಿನಲ್ಲಿ ಡಿಪಾಸಿಟ್ ಇಡಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಣ್ಣಪ್ಪ, ಸರ್ಕಾರಿ ಕೆಲಸ ದೇವರ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಭಕ್ತಿ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ನಿರ್ವಹಿಸಿರುವ ತೃಪ್ತಿ ನನಗಿದೆ. ತಾವು ಕೊಟ್ಟ ಸನ್ಮಾನಕ್ಕೆ ಚಿರಋಣಿಯಾಗಿದ್ದೇನೆ ಎಂದರು.

ನಂದಶ್ರೀ ಪ್ರಾರ್ಥಿಸಿದರು. ಕಾವೇರಿ ವ್ಯಕ್ತಿ ಪರಿಚಯ ಮಾಡಿದರು. ಕೃಷ್ಣಮೂರ್ತಿ ನಿರೂಪಿಸಿದರು. ಪಿಡಿಒ ನಾಗರಾಜ್ ಸ್ವಾಗತಿಸಿ, ವಂದಿಸಿದರು.

Malnad Times

Recent Posts

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

15 mins ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

3 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

10 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

20 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

1 day ago