Categories: Ripponpete

ಹಾಲಪ್ಪನಂತಹ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ ; ಕಾಗೋಡು ತಿಮ್ಮಪ್ಪ


ರಿಪ್ಪನ್‌ಪೇಟೆ: ರಾಜಕೀಯ ಮುತ್ಸದಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪನವರು ನನಗೆ ಆಶೀರ್ವಾದ ಮಾಡಿ ಬಾಹ್ಯ ಬೆಂಬಲ ನೀಡಿದ್ದಾರೆಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರದು ಮೂರ್ಖತನದ ಪರಮಾವಧಿ ಎಂದು ಹೇಳಿ, ಅಂತಹ ಕೀಳು ಮಟ್ಟದ ವ್ಯಕ್ತಿತ್ವ ನನ್ನದಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರವಾಗಿ ಖಂಡಿಸಿದರು.

ಹೆದ್ದಾರಿಪುರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಬೆಂಬಲ ವ್ಯಕ್ತಪಡಿಸುತ್ತಿದ್ದು ಬಿಜೆಪಿಯವರು ಸುಳ್ಳು ಅಪಪ್ರಚಾರದಲ್ಲಿ ತೊಡಗಿಕೊಂಡು ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜಗಂದ ದಳ ನಿಷೇಧದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾಂಗ ಬದ್ದವಾಗಿ ಕಾನೂನು ಕ್ರಮ ಕೈಗೊಳ್ಳಬೇಕೇ ಹೊರತು ಏಕಾಏಕಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ ಈ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದರು.

ತಮ್ಮ ಮಗಳು ಬಿಜೆಪಿ ಸೇರ್ಪಡೆ ವಿಚಾರದಲ್ಲಿ ತಮ್ಮದೊಂದಿಗೆ ಚರ್ಚಿಸಿದ್ದಾರೆಂದು ಹೇಳುತ್ತಿದ್ದಾರೆಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಮಾಜವಾದಿ ಸಿದ್ಧಾಂತದಿಂದ ಬೆಳದು ಬಂದತಂಹ ವ್ಯಕ್ತಿ ಈ ರೀತಿಯಲ್ಲಿ ನಾನು ಪಕ್ಷ ಸೇರುವುದಾಗಿ ಎಲ್ಲಿಯೂ ನನ್ನೊಂದಿಗೆ ಚರ್ಚಿಸಿಲ್ಲ ಮಕ್ಕಳು ಬೆಳದು ನಿಂತಮೇಲೆ ನಿರ್ಧಾರ ಅವರಿಗೆ ಬಿಟ್ಟವಿಚಾರವಾಗಿದೆ ಎಂದು ಈ ಬಾರಿ 100ಕ್ಕೆ 100 ರಷ್ಟು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಗೋಪಾಲಕೃಷ್ಣರಿಗೆ ನನ್ನ ಸಂಪೂರ್ಣ ಬೆಂಬಲವಿರುತ್ತದೆಂದು ಹೇಳಿದರು.

ನನ್ನ ಆರೋಗ್ಯ ಸಮಸ್ಯೆಯಿಂದಾಗಿ ಬಿರುಸಾಗಿ ಪ್ರಚಾರ ಕೈಗೊಳ್ಳುತ್ತಿಲ್ಲ ಎಂದು ಹೇಳಿ, ಮತದಾರರು ಈ ಬಾರಿ ನನ್ನ ಅಳಿಯ ಗೋಪಾಲಕೃಷ್ಣರಿಗೆ ಬೆಂಬಲಿಸಿ ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಂಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಭೋಜಪ್ಪ, ಬಂಡಿ ರಾಮಚಂದ್ರ, ವಾಸಪ್ಪಗೌಡ, ಕಲ್ಲೂರು ತೇಜಮೂರ್ತಿ, ಎನ್.ಚಂದ್ರೇಶ್, ಗಣೇಶ್‌ರಾವ್ ಕೆರೆಹಳ್ಳಿ ಇನ್ನಿತರರು ಹಾಜರಿದ್ದರು.

Malnad Times

Recent Posts

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

57 mins ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

14 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

16 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

17 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

18 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

19 hours ago