Categories: Ripponpete

ಹುಲ್ಲಿನ ಬಣವೆಗೆ ಬೆಂಕಿ 50 ಸಾವಿರ ರೂ. ನಷ್ಟು ನಷ್ಟ !



ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಮಾಣಿಕೆರೆ ನಾಗೇಂದ್ರಪ್ಪಗೌಡರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋದ ಘಟನೆ ಇಂದು ನಡೆದಿದೆ.


ಸುಮಾರು ಐವತ್ತು ಸಾವಿರ ರೂ. ಮೌಲ್ಯದ ಹುಲ್ಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ವಾಹನ ಬೆಂಕಿ ಅರಿಸಲು ಪ್ರಯತ್ನಿಸಿದರೂ ಎನ್ನಲಾಗಿದೆ.

ಮಸರೂರು ವೀರಭದ್ರಸ್ವಾಮಿಗೆ ರುದ್ರಾಭಿಷೇಕ ಅರ್ಚನೆ :
ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ ಮಸರೂರು ಶ್ರೀ ವೀರಭದ್ರೇಶ್ವರ ಸ್ವಾಮಿ ಸೇವಾ ಸಮಿತಿಯವರು ಮಳಲಿಮಠದ ಡಾ.ಗುರುನಾಗಭೂಷಣ ಸಿವಾಚಾರ್ಯ ಮಹಾಸ್ವಾಮಿಗಳ ದಿವ್ಯಸಾನಿದ್ಯದಲ್ಲಿ ಫೆಬ್ರವರಿ 5 ರಂದು ಭಾನುವಾರ ಬೆಳಗ್ಗೆ 8 ಗಂಟೆಗೆ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಅರ್ಚನೆಯನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಂತರ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡುವರು.
ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.

Malnad Times

Recent Posts

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

12 mins ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

24 mins ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

3 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

5 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

6 hours ago

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ !

ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…

7 hours ago