ರಿಪ್ಪನ್ಪೇಟೆ: ಜಾನುವಾರಗಳಲ್ಲಿ ಕಾಣಿಸಿಕೊಂಡಿರುವ ಚರ್ಮಗಂಟು ರೋಗ ಸೇರಿದಂತೆ ಇನ್ನಿತರ ಮಾರಕ ರೋಗದಿಂದ ರೈತರು ಧೈರ್ಯಗೆಡದೆ ರೋಗದ ನಿಯಂತ್ರಣದೊಂದಿಗೆ ಜಾನುವಾರುಗಳನ್ನು ರಕ್ಷಿಸುವುದರೊಂದಿಗೆ ಪೌಷ್ಟಿಕಾಂಶದ ಆಹಾರವನ್ನು ನೀಡಿ ಹೆಚ್ಚು ಹಾಲಿನ ಉತ್ಪಾದನೆಯನ್ನು ಮಾಡಿಕೊಳ್ಳುವಂತೆ ತಳಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ, ಕಾಂಗ್ರೆಸ್ ಜಿಲ್ಲಾ ಮುಖಂಡರಾದ ಗೌರಮ್ಮ ಕರೆ ನೀಡಿದರು.
ರಿಪ್ಪನ್ಪೇಟೆ ಸಮೀಪದ ತಳಲೆ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಹೊಸನಗ ತಾಲ್ಲೂಕು ತಳಲೆ ಗ್ರಾಮದಲ್ಲಿ ಆಯೋಜಿಸಲಾದ ಜಾನುವಾರು ಚಿಕಿತ್ಸಾ ಶಿಬಿರ ಮತ್ತು ಮಿಶ್ರ ತಳಿ ಹಸು-ಕರು ಪ್ರದರ್ಶನ ಹಾಗೂ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರಮ್ಮ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿದರು.
ಶಿಬಿರದಲ್ಲಿ ಪಶುವೈದ್ಯಾಧಿಕಾರಿ ಡಾ.ಫಣಿರಾಜ್, ಸಿಬ್ಬಂದಿಗಳಾದ ರಂಗಪ್ಪ, ಹೇಮಪ್ಪ ಉತ್ತಮವಾಗಿ ಕಾರ್ಯನಿರ್ವಹಿಸಿದರು.
ಪಶುವೈದ್ಯಕಾಲೇಜ್ ಪ್ರಾಧ್ಯಾಪಕ ಡಾ.ಎನ್.ಬಿ.ಶ್ರೀಧರ, ಜಿಲ್ಲಾ ಪಶುವೈದ್ಯ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿಯಲಿ ಶಿಮುಲ್ ಉಪವ್ಯವಸ್ಥಾಪಕ ಡಾ.ಶರತ್, ಡಾ.ಜಿ.ಯು.ಮಂಜು, ಬೆಳ್ಳೂರು ಪಶು ಆಸ್ಪತ್ರೆಯ ಡಾ.ಶರತ್ ಸಾಗರ್ ಇನ್ನಿತರರು ಭಾಗವಹಿಸಿ ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಡಾ.ಗಿರೀಶ್ ಅವರನ್ನು ಹಾಲು ಉತ್ಪಾದಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ರಿಪ್ಪನ್ಪೇಟೆ ಪಶು ಅತ್ಪತ್ರೆ ವೈದ್ಯಾಧಿಕಾರಿ ಡಾ.ಗಿರೀಶ್ ಸ್ವಾಗತಿ ನಿರೂಪಿಸಿ ವಂದಿಸಿದರು.
ಶಿಬಿರದಲ್ಲಿ 57 ಮಿಶ್ರತಳಿ ಜಾನುವಾರುಗಳು ಹಾಗು 45 ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…