ಹೊಂಬುಜ ಮಠಕ್ಕೆ ಭೇಟಿ ನೀಡಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

0 43

ರಿಪ್ಪನ್‌ಪೇಟೆ: ನಾಡಿನ ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರಿಯ ಮಾಜಿ ಶಾಸಕರು ಹಾಗೂ ಮಾಜಿ ಉಪಮಂತ್ರಿ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿದರು.

ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಶ್ರೀಗಳ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಹಾಗೂ ಶಿವಮೊಗ್ಗದ ಆಶ್ರಯ ಸಮಿತಿಯ ಸದಸ್ಯರಾದ ಶ್ರೀ ಯಶೋಧರ ಹೆಗ್ಡೆ, ದಿಗಂಬರ ಜೈನ ಸಮಾಜದ ಅಧ್ಯಕ್ಷರಾದ ಶ್ರೀ ಪ್ರಭಾಕರ ಗೋಗಿ ಹಾಗೂ ಸರ್ವಸದಸ್ಯರು, ಕೆ.ಜೆ.ಎ. ನಿರ್ದೇಶಕರಾದ ಶಿವಮೊಗ್ಗದ ಶ್ರೀ ರತ್ನಕುಮಾರ್ ಜೈನ್‌ರವರು ಉಪಸ್ಥಿತರಿದ್ದರು.
ಪರಮಪೂಜ್ಯ ಶ್ರೀಗಳವರಿಗೆ ಕುಟುಂಬಸ್ಥರು ಸನ್ಮಾನಿಸಿ ಗೌರವ ಸಮರ್ಪಿಸಿದರು.

Leave A Reply

Your email address will not be published.

error: Content is protected !!