Categories: Ripponpete

BSY ಲಿಂಗಾಯಿತ ಜನಾಂಗಕ್ಕೆ ನಾಯಕನಾಗದೇ ಸರ್ವ ಜನಾಂಗದ ನಾಯಕ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆಂದು ಶಾಸಕ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು.

ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು, ಕೆಂಚನಾಲ, ಅರಸಾಳು, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆ-ಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ಕಳೆದ ಹತ್ತು ವರ್ಷ ಕ್ಷೇತ್ರದ ಶಾಸಕನಾಗಿದ್ದ ಅವಧಿಯಲ್ಲಿ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಕುರಿತು ಶಾಸನ ಸಭೆಯಲ್ಲಿ 5 ನಿಮಿಷಗಳಷ್ಟು ಮಾತನಾಡದವರು ಈಗ ಪುನಃ ಚುನಾವಣೆಗೆ ಸ್ಪರ್ಧಿಸಿದ್ದಾರೆ ಈಗ ಗೆದ್ದು ಏನು ಮಾಡಿಯಾನು ಎಂದು ಲೇವಡಿ ಮಾಡಿ, ಈಗ ಮತದಾರರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾನೆ ಅವನ ಈ ನಾಟಕವನ್ನು ಜನರು ತಿರಸ್ಕರಿಸುವ ಮೂಲಕ ಬಿಜೆಪಿಗೆ ಬೆಂಬಲಿ ಮತನೀಡಿ ಅಭಿವೃದ್ದಿಗೆ ಅಧ್ಯತೆ ನೀಡಿ ಎಂದು ಮನವಿ ಮಾಡಿದ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರರನ್ನು ಜೈಲಿಗೆ ಕಳುಹಿಸುತ್ತೇನೆ ಮತ್ತು ದೇಶದ ಪ್ರಧಾನಿಯನ್ನು ಗುಂಡಿಕ್ಕಿ ಎಂದವರ ನಾಲಿಗೆಯೋ ಆಥವಾ ಏನು ? ಎಂದು ನೆನಪಿಸಿ ಬಸ್‌ಸ್ಟ್ಯಾಂಡ್ ರಾಘವೇಂದ್ರರವರು ಬಸ್‌ಸ್ಟ್ಯಾಂಡ್‌ನೊಂದಿಗೆ ವಿಮಾನ ನಿಲ್ದಾಣವನ್ನು ಮಾಡಿದರೂ ಈತ ಏನು ಮಾಡಿದ್ದಾನೆಂದು ಬಹಿರಂಗವಾಗಿ ಹೇಳಿಕೊಳ್ಳಲೆಂದು ಸವಾಲು ಹಾಕಿದರು.

ಬಿ.ಎಸ್.ಯಡಿಯೂರಪ್ಪ ಬರೀ ಲಿಂಗಾಯಿತ ನಾಯಕರಾಗದೇ ಸರ್ವ ಜನಾಂಗದ ನಾಯಕರು ಅವರು ಲಿಮಗಾಯಿತರಿಲ್ಲದ ಮಂಗಳೂರು, ಕುಂದಾಪುರ, ಬೈಂದೂರು ಕಡೆಯಲ್ಲಿ ಹೋದರೆ ಬೇರೆ ಜಾತಿಯವರು ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಾರೆಂದು ಹೇಳಿ ಬರೀ ಲಿಂಗಾಯಿತ ಸಮಾಜದ ಆಭಿವೃದ್ದಿಗೆ ಅನುದಾನ ಕೊಡದೇ ನಮ್ಮ ಈಡಿಗ ಸಮಾಜದ ಮಠಕ್ಕೂ 5 ಕೋಟಿ ರೂ. ಹಣ ಕೊಡಿಸಿರುವುದಾಗಿ ವಿವರಿಸಿ ಸಣ್ಣ ಸಣ್ಣ ಜಾತಿ ಪಂಗಡದವರಿಗೂ ಅನುದಾನ ಕೊಡಿಸಿರುವುದಾಗಿ ಹೇಳಿ ಅಭಿವೃದ್ದಿಯೇ ನಮ್ಮ ಮೂಲ ಮಂತ್ರವಾಗಿದ್ದು ಮತದಾರರನ್ನು ಪ್ರೀತಿ ವಿಶ್ವಾಸದಿಂದ ಕಾಣಲು ಶಾಸಕನಾಗಬೇಕಾಗಿಲ್ಲ ನಮ್ಮ ಹೃದಯಾಂತರಾಳದಲ್ಲಿದ್ದರೆ ಸಾಕು ಎಂದು ತಿರುಗೇಟು ನೀಡಿದರು.

ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಮಾತನಾಡಿ, ಬೇಳೂರು ಗೋಪಾಲಕೃಷ್ಣ ಒಬ್ಬ ನಾಲಾಯಕ್ ಆಂತಹವರನ್ನು ಆಯ್ಕೆ ಮಾಡುವ ಬದಲು ಅಭಿವೃದ್ಧಿಯ ಹರಿಕಾರ ಕ್ಷೇತ್ರದ ಸಮಸ್ಯೆಗಳ ಕುರಿತು ಹೋರಾಟ ನಡೆಸಿ ಅನುಷ್ಟಾನಗೊಳಿಸುವಂತಹ ವ್ಯಕ್ತಿ ಹರತಾಳು ಹಾಲಪ್ಪನವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

‘ಚುನಾವಣೆ ಫಲಿತಾಂಶ ಬಂದ ಅರು ತಿಂಗಳಲ್ಲಿ ಆರಸಾಳು ರೈಲ್ವಿ ನಿಲ್ದಾಣದಲ್ಲಿ ಎಲ್ಲ ರೈಲುಗಳನ್ನು ನಿಲುಗಡೆ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು.’
– ಹರತಾಳು ಹಾಲಪ್ಪ, ಶಾಸಕ

ಕಾಗೋಡು ಪುತ್ರಿ ಡಾ.ರಾಜಾನಂದಿನಿ, ಬಿಜೆಪಿ ಮಂಡಲದ ಆಧ್ಯಕ್ಷ ಗಣಪತಿ ಬಿಳಗೋಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಜಿ.ಪಂ ಮಾಜಿ ಸದಸ್ಯೆ ಎ.ಟಿ.ನಾಗರತ್ನ, ಹುಸೇನ್‌ಸಾಬ್, ಘಟಕದ ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಸುರೇಶ್‌ಸಿಂಗ್, ದೇವೇಂದ್ರಪ್ಪಗೌಡ, ರಾಮಚಂದ್ರ ಹರತಾಳು ಇನ್ನಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಜೆಡಿಎಸ್ ಪಕ್ಷ ತೊರೆದು ಶಾಸಕರ ಸಮ್ಮಖದಲ್ಲಿ ನೂರಾರು ಯುವಕರು ಬಿಜೆಪಿ ಸೇರ್ಪಡೆಯಾದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

6 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

10 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

11 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

13 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

13 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

20 hours ago