Categories: Ripponpete

Hospital Inauguration | ರಿಪ್ಪನ್‌ಪೇಟೆಯಲ್ಲಿ ಸುಸಜ್ಜಿತ ನೂತನ ಖಾಸಗಿ ಆಸ್ಪತ್ರೆ ಲೋಕಾರ್ಪಣೆ | ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ಪಡೆಯಲು ‘ನಂದಿ ಆಸ್ಪತ್ರೆ’ ಸಹಕಾರಿ ; ಶ್ರೀಗಳು

ರಿಪ್ಪನ್‌ಪೇಟೆ : ಹಳ್ಳಿಯಲ್ಲಿನ ಸಾಮಾನ್ಯ ಜನರು ಇಂದಿನ ದುಬಾರಿ ಖರ್ಚು ಮಾಡಿಕೊಂಡು ದೂರದ ದೊಡ್ಡದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಕಷ್ಟಕರವಾಗಿದೆ ಆ ನಿಟ್ಟಿನಲ್ಲಿ ತಮ್ಮ ಮನೆಯ ಬಾಗಿಲಿನಲ್ಲಿ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ಪಡೆಯುವಂತಾಗಲು ನಂದಿ ಆಸ್ಪತ್ರೆ ಸಹಕಾರಿಯಾಗಲಿ ಎಂದು ಉಜ್ಜಯನಿ ಪೀಠದ ಜಗದ್ಗುರುಗಳು ಹೇಳಿದರು.

ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ನಂದಿ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.


ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿ, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾರಕ ರೋಗಗಳಿಂದ ಜನರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ದೂರದ ಆಸ್ಪತ್ರೆಗಳಿಗೆ ಹೋಗಿ ಬರುವುದೇ ಕಷ್ಟವಾಗಿರುವಾಗ ರಿಪ್ಪನ್‌ಪೇಟೆಯಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ಆರಂಭಿಸುವುದರೊಂದಿಗೆ ಸಾಕಷ್ಟು ವೈದ್ಯರಿಗೆ ಮತ್ತು ಆರೋಗ್ಯ ಶೂಶ್ರೂಷಕಿಯರಿಗೆ ಔಷಧಿ ಅಂಗಡಿಯವರಿಗೆ ಸ್ವಾವಲಂಬಿ ಬದುಕಿಗೆ ಮಾರ್ಗದರ್ಶಿಯಾಗಿರುವುದು ಪ್ರಶಂಸನೀಯವೆಂದರು.


ಇದೇ ಕಟ್ಟಡದಲ್ಲಿ ಐಶ್ವರ್ಯ ಕೃಷಿ ಉಪಕರಣಗಳ ಅಂಗಡಿಗೂ ಭೇಟಿ ನೀಡಿ ಗುರು ವಿರಕ್ತ ಪೂಜ್ಯರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ, ನಾರಾಯಣ ಗುರು ಪೀಠದ ರೇಣುಕಾನಂದ ಮಹಾಸ್ವಾಮೀಜಿ, ಶಾಸಕ ಹರತಾಳು ಹಾಲಪ್ಪ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್, ಸಚಿನ್ ಗೌಡ, ಜೆ.ಎಂ. ಶಾಂತಕುಮಾರ್, ಹುಗುಡಿ ರಾಜು, ಬೆಳಕೋಡು ಹಾಲಸ್ವಾಮಿಗೌಡ ಇನ್ನಿತರರು ಹಾಜರಿದ್ದರು.

ಗುರು-ವಿರಕ್ತ ಜಗದ್ಗುರುಗಳ ಆಶೀರ್ವಾದ ಪಡೆದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್‌ಪೇಟೆ : ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಲೇ ರಿಪ್ಪನ್‌ಪೇಟೆಯಲ್ಲಿ ಖಾಸಗಿ ಆಸ್ಪತ್ರೆ ಲೋಕಾರ್ಪಣಾ ಸಮಾರಂಭದಲ್ಲಿ ಉಜ್ಜಯನಿ ಪೀಠ ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರುಗಳು ಭಾಗವಹಿಸಿದ ಸಮಾರಂಭದಲ್ಲಿ ಶಾಸಕ ಹರತಾಳು ಹಾಲಪ್ಪ ಪಾಲ್ಗೊಂಡು ಗುರು ವಿರಕ್ತ ಜಗದ್ಗುರುಗಳ ಆಶೀರ್ವಾದ ಪಡೆದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

3 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

6 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

7 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

11 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

13 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago