Categories: Sagara News

ಕೊಟ್ಟಿಗೆಗೆ ಬೆಂಕಿ ತಗುಲಿ ಒಂದು ದನ ಸಜೀವ ದಹನ, ಮೂರು ದನಗಳ ಸ್ಥಿತಿ ಗಂಭೀರ !

ಸಾಗರ : ತಾಲ್ಲೂಕು ಉಳ್ಳೂರು ಗ್ರಾಮ ಪಂಚಾಯಿತಿ ನಂದಿತಳೆ ಗ್ರಾಮದ ಪ್ರಕಾಶ್ ಆಚಾರ್ಯರವರ ಕೊಟ್ಟಿಗೆಗೆ ಗುರುವಾರ ರಾತ್ರಿ ಸುಮಾರು 12.45 ಕ್ಕೆ ಮಲಗಿದ್ದಾಗ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಒಂದು ಜಾನುವಾರು ಮೃತಪಟ್ಟಿದ್ದು, ಇನ್ನೂ ನಾಲ್ಕು ದನಗಳಿಗೆ ಬೆಂಕಿಯಿಂದ ಸುಟ್ಟ ಗಾಯಗಳಾಗಿದ್ದು, ಇದರಲ್ಲಿ 3 ದಿನಗಳ ಸ್ಥಿತಿ ಗಂಭೀರವಾಗಿದೆ.


ಇವರುಗಳ ವಾಸದ ಮನೆಯು ಕೊಟ್ಟಿಗೆ ಪಕ್ಕದಲ್ಲೆ ಇದ್ದು ಇವರ ಮನೆಯೂ ಸಹ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದು, ಟಿವಿ, ಇವರು ಮಲಗಿಕೊಳ್ಳುತ್ತಿದ್ದ ಮಂಚ ಈ ಬೆಂಕಿ ಅವಘಡದಿಂದ ಸುಟ್ಟು ಹೋಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬ ಬೀದಿಗೆ ಬಂದಿರುತ್ತದೆ. ರಾತ್ರಿ ಬೆಂಕಿ ಅವಗಡದ ಬಗ್ಗೆ ಅಗ್ನಿಶಾಮಕ ಕಛೇರಿಗೆ ಫೋನ್ ಮಾಡಿದರೆ ನೀರಿಲ್ಲ ಈಗ ಕಳಿಸಲಿಕ್ಕೆ ಆಗಲ್ಲ ಅಂತ ಹೇಳಿದರು. ಇದು ಅಧಿಕಾರಿಗಳ ನಿರ್ಲಕ್ಷ್ಯ ಅಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದರು.


ಶಾಸಕರಾದ ಹೆಚ್. ಹಾಲಪ್ಪನವರು ಬೆಳ್ಳಂಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ಕಲ್ಪಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಆಧಿಕಾರಿಗಳಿಗೆ ಹೇಳಿದರು.


ಚುನಾಯಿತ ಪ್ರತಿನಿಧಿಗಳು, ಪಕ್ಷ ಮುಖಂಡರು ಗ್ರಾಮಸ್ಥರುಗಳು ಸ್ಥಳದಲ್ಲಿ ಹಾಜರಿದ್ದರು. ಸರ್ಕಾರದಿಂದ ಏನಾದರು ಪರಿಹಾರ ಸಿಗಲಿ ಎಂದು ಕುಟುಂಬದವರು
ವಿನಂತಿಸಿದ್ದಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

11 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

13 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

14 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

19 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

20 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago