ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನೋರ್ವ ದಿಢೀರ್ ಎಂದು ಕಾಡಿಗೆ ಹೋಗಿ ನೇಣು ಬಿಗಿದುಕೊಂಡ ಘಟನೆ ಸಾಗರದಲ್ಲಿ ನಿನ್ನೆ ನಡೆದಿದೆ.
ನೇಣು ಬಿಗಿದ ಜಾಗದಲ್ಲಿ ಬೈಕ್ ಅನಾಥವಾಗಿ ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯುವಕ ಸಾಗರದ ಉಳ್ಳೂರು ಜೋಗಿನಗದ್ದೆ ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ ಶವವಾಗಿ ಪತ್ತೆಯಾಗಿದ್ದ ಜಾಗದಲ್ಲಿ ಡೆತ್ನೋಟ್
ಪತ್ತೆಯಾಗಿದೆ. ಅದರಲ್ಲಿ ಹಣಕಾಸಿನ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡಿರುವುದಾಗಿ ಉಲ್ಲೇಖಿಸಿದ್ದಾನೆ.
ಸಿದ್ದಾಪುರ ತಾಲೂಕಿನ ಅಣ್ಣಪ್ಪ ಎಂಬ ವ್ಯಕ್ತಿ ಹಣ ಕೊಡುವಂತೆ
ದುಂಬಾಲು ಬಿದ್ದಿದ್ದು ಆತನ ಕಿರುಕುಳುಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ ಪತ್ತೆಯಾಗಿರುವುದು ಈ ಎಲ್ಲಾ ಘಟನಾವಳಿಗೆ ಹಣಕಾಸಿನ
ಒತ್ತಡವೇ ಕಾರಣ ಎಂಬುದು ತಿಳಿದು ಬಂದಿದೆ.
ಎಷ್ಟು ಹಣ, ಅಣ್ಣಪ್ಪನೇ ಹಣಕೊಟ್ಟಿದ್ದಾ ಅಥವಾ ಆತ್ಮಹತ್ಯೆ
ಮಾಡಿಕೊಂಡ ಯುವಕನಿಗೆ ಈ ಅಣ್ಣಪ್ಪ ಎಷ್ಟು ಹಣ ಕೊಟ್ಟಿದ್ದ
ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ಅಕ್ಷಯ್ (22) ಎಂದು ತಿಳಿದು ಬಂದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…