Categories: Sagara News

ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನ ; ಓರ್ವ ಆರೋಪಿ ಅರೆಸ್ಟ್ !

ಸಾಗರ: ತಾಲೂಕಿನ ಮುಂಬಾಳು ಗ್ರಾಮದ ಬೋರ್‌ವೆಲ್ ಕಂಟ್ರಾಕ್ಟರ್ ಲೋಕನಾಥ್ ಅವರ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಮಾಲು ಸಹಿತ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಮುಂಬಾಳು ಗ್ರಾಮದ ಲೋಕನಾಥ್ ಅವರು ತಮ್ಮ ಖಾಲಿ ಜಾಗದಲ್ಲಿ ಸಂಗ್ರಹಿಸಿಟ್ಟಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್‌ಗಳು ಕಳ್ಳತನವಾಗಿರುವುದಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆಗೆ ಫೆ. 17ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು ಏ. 3ರಂದು ಮೊದಲ ಆರೋಪಿ ಹೊಸನಗರ ತಾಲೂಕಿನ ಚಿರಂಜೀವಿ @ ಚಿರು @ ಚಿನ್ನ ಎಂಬಾತನನ್ನು ಸಾಗರ ಸಮೀಪದ ಬಳಸಗೋಡು ಸಮೀಪ ವಶಕ್ಕೆ ಪಡೆಯಲಾಗಿದೆ.

ಚಿರಂಜೀವಿ ಅವರಿಂದ ಸುಮಾರು 2 ಲಕ್ಷ ರೂ. ಬೆಲೆಬಾಳುವ ಬೋರ್‌ವೆಲ್ ಕೇಸಿಂಗ್ ಪೈಪ್ ಮತ್ತು ಅದನ್ನು ಸಾಗಿಸುತ್ತಿದ್ದ ಸುಮಾರು 10 ಲಕ್ಷ ರೂ. ಬೆಲೆಯ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಎರಡನೇ ಆರೋಪಿ ಸಾಗರ ತಾಲೂಕು ಗೇರ್‌ಬೀಸ್ ಗ್ರಾಮದ ಪ್ರವೀಣ್ @ ಪಾಂಡು ತಲೆ ಮರೆಸಿಕೊಂಡಿದ್ದಾನೆ.

ಜಿಲ್ಲಾ ರಕ್ಷಣಾಧಿಕಾರಿ ಮಿಥನ್ ಕುಮಾರ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ಅನಿಲ್ ಕುಮಾರ್ ಭೂಮಾರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಸಾಗರ ಉಪವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಸಾರಥ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಪ್ರವೀಣ್ ಕುಮಾರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ನಾರಾಯಣ ಮಧುಗಿರಿ, ತಿರುಮಲೇಶ್, ಹೊಸಮನಿ, ಸಿಬ್ಬಂದಿಗಳಾದ ಸನಾವುಲ್ಲಾ, ಶೇಕ್ ಫೈರೋಜ್ ಅಹ್ಮದ್, ರವಿಕುಮಾರ್, ಹನುಮಂತ ಜಂಬೂರ್ ಪಾಲ್ಗೊಂಡಿದ್ದರು.

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

2 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

3 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

4 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

7 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

19 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

20 hours ago