ಸಾಗರ : ಪಟ್ಟಣದ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂದಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ಯುದ್ದ ನಡೆಯಿತು.
ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿಯಲ್ಲಿ ಮಕ್ಕಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಬಾಲಕ ಮಾನಸಿಕವಾಗಿ ಬೇಸರಗೊಂಡಿದ್ದಾನೆ. ಬಾಲಕನಿಗೆ ರಾಖಿ ಕಟ್ಟಿದಾಗ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್ರೂಮ್ಗೆ ಹೋಗಿ ಬಾಗಿಲು ಹಾಕಿಕೊಂಡು ಅಳಲಾರಂಭಿಸಿದನು. ಆಗ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವರ್ಗ ವಿದ್ಯಾರ್ಥಿಯನ್ನು ಸಮಾಧಾನಪಡಿಸಿ, ಬಾಲಕನ ಕೈಗೆ ಕಟ್ಟಿದ್ದ ರಾಖಿಯನ್ನು ತೆಗೆಸಿದ್ದಾರೆ. ಜೊತೆಗೆ ಎಲ್ಲ ವಿದ್ಯಾರ್ಥಿಗಳು ಪರಸ್ಪರ ಕಟ್ಟಿಸಿಕೊಂಡ ರಾಖಿಯನ್ನು ಬಿಚ್ಚಿಸಿ ಕಳಿಸಿದ್ದರು. ಆದರೂ ಗುರುವಾರ ಬೆಳಿಗ್ಗೆ 11 ಗಂಟೆವರೆಗೆ ಮಕ್ಕಳನ್ನು ಹೊರಗೆ ನಿಲ್ಲಿಸುವ ಶಿಕ್ಷೆಯನ್ನು ನೀಡಲಾಗಿತ್ತು.
ಈ ವಿಷಯವನ್ನು ವಿದ್ಯಾರ್ಥಿಗಳು ಮನೆಗೆ ಹೋಗಿ ಪೋಷಕರಿಗೆ ತಿಳಿಸಿದ್ದರು.
ರಾಕಿ ಬಿಚ್ಚಿಸಿದ್ದಕ್ಕೆ ತೀವ್ರ ಆಕ್ರೋಶಗೊಂಡ ಪೋಷಕರು ಹಾಗೂ ಹಿಂದೂ ಪರ ಸಂಘಟನೆಯವರು :
ಗುರುವಾರ ಪೋಷಕರು ಮತ್ತು ಹಿಂದೂಪರ ಸಂಘಟನೆಗಳು ಶಾಲೆಗೆ ಆಗಮಿಸಿ ರಾಖಿ ಬಿಚ್ಚಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಿಂದೂಪರ ಸಂಘಟನೆಯ ಕೋಮಲ್ ರಾಘವೇಂದ್ರ, ಸಂತೋಷ್, ರಾಘವೇಂದ್ರ ಕಾಮತ್, ಕುಮಾರ ಶೆಟ್ಟಿ, ಶ್ರೀಧರ್ ಸಾಗರ್, ಪ್ರತಿಮಾ ಜೋಗಿ ಇನ್ನಿತರರು ಕಟ್ಟಿದ್ದ ರಾಖಿಯನ್ನು ಬಿಚ್ಚಿಸಿದ್ದ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕ ವರ್ಗವನ್ನು ತರಾಟೆಗೆ ತೆಗೆದುಕೊಂಡರು.
ಪರಿಸ್ಥಿತಿಯನ್ನು ತಿಳಿಗೊಳಿಸಿದ ಅಧಿಕಾರಿಗಳು :
ಸ್ಥಳಕ್ಕೆ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್, ಸರ್ಕಲ್ ಇನ್ಸ್ಪೆಕ್ಟರ್ ಸೀತಾರಾಮ್, ಕೃಷ್ಣಪ್ಪ, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಮುಖ್ಯ ಶಿಕ್ಷಕಿ ರಾಖಿ ತೆಗೆಸಿದಕ್ಕೆ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಘಟನೆ ಸುಖಾಂತ್ಯಗೊಂಡಿತು.
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…