ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ; ಪ್ರಯಾಣಿಕರಿಗೆ ಕರೆಂಟ್ ಶಾಕ್ !

0 213

ಸಾಗರ: ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಬಸ್ ಪ್ರಯಾಣಿಕರಿಗೆ ವಿದ್ಯುತ್ ಶಾಕ್‌ನ ಅನುಭವವಾಗಿದೆ ಎಂದು ತಿಳಿದು ಬಂದಿದೆ.


ಸಾಗರ ತಾಲೂಕು ಗೆಣಸಿನಕುಣಿ ಬಳಿ ಘಟನೆ ಸಂಭವಿಸಿದೆ.‌ ಸಿಗಂದೂರು ಕಡೆಯಿಂದ ಸಾಗರಕ್ಕೆ ಬರುವ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ವಯರ್ ಬಸ್ ಮೇಲೆ ಬಿದ್ದಿದೆ ಎಂದು‌ ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.


ಘಟನೆಯಲ್ಲಿ ಕೆಲವರಿಗೆ ಸಣ್ಣ-ಪುಟ್ಟ ಗಾಯವಾಗಿತ್ತು. ಗಾನವಿ ಎಂಬ ವಿದ್ಯಾರ್ಥಿನಿ ಪ್ರಜ್ಞೆ ಕಳೆದುಕೊಂಡಿದ್ದಳು. ಆಕೆಯನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಗಾನವಿ ಸೇರಿದಂತೆ ಇಬ್ಬರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Leave A Reply

Your email address will not be published.

error: Content is protected !!