ಸಾಗರ : ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಮತ್ತವರ ಬೆಂಬಲಿಗರು ವಸ್ತುನಿಷ್ಟ ವರದಿ ಮಾಡುತ್ತಿರುವ ಪತ್ರಕರ್ತರನ್ನು ಪ್ರಶ್ನೆ ಮಾಡುತ್ತಿರುವುದು, ನಿಮ್ಮ ವಿರುದ್ಧ ಕಚೇರಿಗೆ ಪತ್ರ ಬರೆಯುತ್ತೇನೆ ಎಂದು ಬೆದರಿಸುತ್ತಿರುವ ನೀತಿಯನ್ನು ಖಂಡಿಸಿ ಶುಕ್ರವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬೆದರಿಕೆ ಹಾಕುವುದು ಖಂಡನೀಯ:
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಪತ್ರಕರ್ತರು ವಸ್ತುನಿಷ್ಟವಾಗಿ ವರದಿ ಮಾಡುವುದೇ ತಪ್ಪು ಎನ್ನುವ ರೀತಿಯಲ್ಲಿ ಶಾಸಕ ಹರತಾಳು ಹಾಲಪ್ಪ ವರ್ತನೆ ಮಾಡುತ್ತಿದ್ದಾರೆ. ಚುನಾವಣೆಗೆ ಸಂಬಂಧಪಟ್ಟಂತೆ ಪರ ವಿರೋಧದ ಘಟನೆಗಳ ಬಗ್ಗೆ ವರದಿ ಮಾಡುವುದು ಪತ್ರಕರ್ತರ ಆದ್ಯ ಕರ್ತವ್ಯ. ತಮ್ಮ ವಿರುದ್ದ ಸುದ್ದಿ ಮಾಡುತ್ತಿದ್ದಾರೆ ಎಂದು ಪತ್ರಕರ್ತರನ್ನು ಪ್ರಶ್ನೆ ಮಾಡಿ ಅವರಿಗೆ ಬೆದರಿಕೆ ಹಾಕುವುದು ಖಂಡನೀಯ. ಎಲ್ಲ ರಾಜಕೀಯ ಪಕ್ಷಗಳು ಪತ್ರಕರ್ತರ ಬಗ್ಗೆ ಗೌರವಾಧಾರಗಳಿಂದ ನಡೆದುಕೊಳ್ಳಬೇಕು. ಶಾಸಕರು ತಮ್ಮ ಬೆಂಬಲಿಗರಿಗೆ ಎಚ್ಚರಿಕೆ ನೀಡಬೇಕು. ಪತ್ರಕರ್ತರು ವರದಿ ಮಾಡಿದಾಗ ಫೋನಾಯಿಸಿ ಅವರನ್ನು ಪ್ರಶ್ನಿಸುವುದು, ಬೆದರಿಕೆ ಹಾಕುವುದನ್ನು ಕೈಬಿಡದೆ ಹೋದಲ್ಲಿ ಸಂಘ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಿಮ್ಮ ಪರಿಸ್ಥಿತಿ ಏನಾಗುತ್ತೆ ಗೊತ್ತಾ :
ಸಂಘದ ಕಾರ್ಯದರ್ಶಿ ಮಹೇಶ್ ಹೆಗಡೆ ಮಾತನಾಡಿ, ವರದಾಮೂಲದಲ್ಲಿ ಶಾಸಕರಿಂದ ನೋವು ಅನುಭವಿಸಿದವರು ನಡೆಸುತ್ತಿದ್ದ ಸಭೆಯ ವರದಿಯನ್ನು ಎಲ್ಲ ಪತ್ರಿಕೆಗಳು ಪ್ರಕಟಿಸಿವೆ. ಆದರೆ ಶಾಸಕರು ನನ್ನನ್ನು ಕಾರ್ಯಕ್ರಮವೊಂದರಲ್ಲಿ ತಡೆದು ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರು ಇದ್ದರು ಎಂದು ವರದಿ ಮಾಡಿದ್ದೀರಿ. ನೀವು ತಪ್ಪು ವರದಿ ಮಾಡಿದ್ದೀರೆಂದು ನಿಮ್ಮ ಕಚೇರಿಗೆ ಪತ್ರ ಬರೆದರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ ಗೊತ್ತಾ ? ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರ ಎದುರು ಶಾಸಕರು ನನ್ನನ್ನು ಈ ರೀತಿ ಪ್ರಶ್ನೆ ಮಾಡಿದ್ದು ನನಗೆ ತೀರ ಅವಮಾನವಾಗಿದೆ. ಹಾಲಪ್ಪ ಶಾಸಕರಾದ ಮೇಲೆ ಮೂರು ಬಾರಿ ನನ್ನ ವಿರುದ್ದ ಪತ್ರಿಕೆಗೆ ಪತ್ರ ಬರೆದು ದೂರು ನೀಡಿದ್ದಾರೆ ಎಂದು ಹೇಳಿದರು.
ವಸ್ತುನಿಷ್ಠ ವರದಿ ಮಾಡುವುದೇ ತಪ್ಪು ಎನ್ನುವ ಸ್ಥಿತಿ ನಿರ್ಮಾಣವಾಗಿದೆ :
ಸಂಘದ ಅಧ್ಯಕ್ಷ ಜಿ.ನಾಗೇಶ್ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ವಸ್ತುನಿಷ್ಟ ವರದಿ ಮಾಡುವುದೇ ತಪ್ಪು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಬೆದರಿಕೆ ಮೂಲಕ ಪತ್ರಕರ್ತರನ್ನು ಮಣಿಸಲು ಸಾಧ್ಯವಿಲ್ಲ. ವಸ್ತುಸ್ಥಿತಿ ಬರೆಯುವುದು ಪತ್ರಕರ್ತರ ಕರ್ತವ್ಯ. ಒಂದೊಮ್ಮೆ ನಮ್ಮ ವರದಿಯಿಂದ ನಿಮ್ಮ ಮಾನಹಾನಿಯಾಗಿದ್ದರೇ ಕಾನೂನುಕ್ರಮ ತೆಗೆದುಕೊಳ್ಳಿ. ಅನಗತ್ಯವಾಗಿ ಪತ್ರಕರ್ತರನ್ನು ಬೆದರಿಸುವುದು, ಬರವಣಿಗೆ ಸ್ವಾತಂತ್ರ್ಯ ಕಿತ್ತುಕೊಳ್ಳುವ ಪ್ರಯತ್ನವನ್ನು ಶಾಸಕರೂ ಸೇರಿದಂತೆ ಯಾರೇ ಮಾಡಿದರೂ ಸಂಘಟನೆ ತನ್ನದೇ ಚೌಕಟ್ಟಿನಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದರು.
ಸಂಘದ ಲೋಕೇಶ್ ಕುಮಾರ್, ರವಿ ನಾಯ್ಡು, ಎಂ.ಜಿ.ರಾಘವನ್, ಇಮ್ರಾನ್ ಸಾಗರ್, ಗಿರೀಶ್ ರಾಯ್ಕರ್, ಅಖಿಲೇಶ್ ಚಿಪ್ಳಿ, ನಾಗರಾಜ್, ವೆಂಕಟೇಶ್ ಸಂಪ, ಎಲ್.ಜಿ.ನಾಗರಾಜ್, ಶಿವಕುಮಾರ್ ಗೌಡ, ಬಿ.ಡಿ.ರವಿಕುಮಾರ್ ಚಂದ್ರಶೇಖರ್, ಉಮೇಶ್ ಮೊಗವೀರ, ವಿ.ಶಂಕರ್, ಪ್ರಸಾದ್ ರಫೀಕ್ ಬ್ಯಾರಿ ಇನ್ನಿತರರು ಹಾಜರಿದ್ದರು.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…