Categories: Sagara News

Mobile Towers | ಡಿಸೆಂಬರ್ ಮುಕ್ತಾಯಕ್ಕೆ 35 ಮೊಬೈಲ್ ಟವರ್ ನಿರ್ಮಾಣ ; ಬಿವೈಆರ್

ಸಾಗರ: ಮಲೆನಾಡಿನ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು ಶರಾವತಿ ಹಿನ್ನೀರಿನ ಪ್ರದೇಶಕ್ಕೆ ಆದ್ಯತೆ ನೀಡಿ ಡಿಸೆಂಬರ್ ಮುಕ್ತಾಯಕ್ಕೆ 35 ಮೊಬೈಲ್ ಟವರ್ ನಿರ್ಮಾಣ ಮಾಡುವುದಾಗಿ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ,

ಅವರು ಎಸ್ಎಸ್ ಬೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪದಲ್ಲಿ ವಿಕಾಸ ತೀರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಿಎಸ್ಎನ್ಎಲ್ ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಮಾಡಿದ್ದೇನೆ. ತಮ್ಮ ಗುಣಮಟ್ಟದ ನೆಟ್‌ವರ್ಕ್ ನೀಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು, ಮತ್ತು ರಾಜ್ಯದಲ್ಲಿ ವಿಶೇಷವಾಗಿ ಸಾಗರ ಮತ್ತು ಹೊಸನಗರ ಭಾಗಕ್ಕೆ ಹೆಚ್ಚಿನ ಬಿಎಸ್ಎನ್ಎಲ್ ಟವರ್ ಮಂಜೂರಾತಿ ಮಾಡಲಾಗಿದೆ‌ ಎಂದರು.

ರೈತರ ಬೆಳೆ ವಿಮೆ ವಿಚಾರವಾಗಿ ಮಾತನಾಡಿ, ಮೂರು ವರ್ಷಕ್ಕೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಬೆಳೆ ವಿಮಾ ಕಂಪನಿಗಳಿಂದ ಟೆಂಡರ್ ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ತಿಂಗಳ ಒಳಗೆ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು.

ಜಿಲ್ಲೆಯಲ್ಲಿ 5 ರೈಲ್ವೆ ನಿಲ್ದಾಣಕ್ಕೆ 100 ಕೋಟಿ ರೂ. ಅನುದಾನ ಮಂಜೂರಾಗಿದ್ದು. ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿ ರೈಲು ನಿಲುಗಡಿಗೆ ಈಗಾಗಲೇ ಮನವಿ ಬಂದಿದ್ದು ಇದರ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಜೋಗ ಅಭಿವೃದ್ಧಿ ಕಾಮಗಾರಿ ಕೂಡ ನಡೆಯುತ್ತಿದೆ. ಸಿಗಂದೂರು ಸೇತುವೆ ಕಾಮಗಾರಿ ಮುಂದಿನ ಜುಲೈ ವೇಳೆಗೆ ಮುಗಿಯಬೇಕಾಗಿತ್ತು. ಆದರೆ ನಮ್ಮ ಮನವಿಗೆ ಸ್ಪಂದಿಸಿರುವ ಗುತ್ತಿಗೆದಾರರು 2024 ರ ಜನವರಿ ಇಲ್ಲವೇ ಫೆಬ್ರವರಿ ವೇಳೆಗೆ ಕಾಮಗಾರಿ ಮುಗಿಸಿಕೊಡುವ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಪ ವಿಭಾಗ ಅಧಿಕಾರಿಗಳು, ಡಿಎಫ್ಓ, ಬಿಎಸ್ಎನ್ಎಲ್ ಅಧಿಕಾರಿಗಳು, ಅರಣ್ಯ ಅಧಿಕಾರಿಗಳು ಸೇರಿದಂತೆ ಮಾಜಿ ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್, ಪ್ರಸನ್ನ ಕೆರೆಕೈ ಸೇರಿದಂತೆ ಪ್ರಮುಖರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

23 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago