ಅಕ್ರಮ ಕಳಭಟ್ಟಿ ಸಾರಾಯಿ ಮತ್ತು ಬೆಲ್ಲದ ಕೊಳೆ ವಶಕ್ಕೆ !

ಶಿಕಾರಿಪುರ : ರಾಜ್ಯ ವಿಧಾನಸಭಾ ಚುನಾವಣೆ 2023 ರ  ಮುನ್ನೆಚ್ಚರಿಕೆ ಕ್ರಮವಾಗಿ ಅಬಕಾರಿ ಅಕ್ರಮಗಳನ್ನು  ತಡೆಗಟ್ಟುವ ನಿಟ್ಟಿನಲ್ಲಿ, ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಂತೆ ಹಾಗೂ ಶಿವಪ್ರಸಾದ್ ಸಿ  ಉಪ ಅಧೀಕ್ಷಕರು ಸಾಗರ ಉಪ ವಿಭಾಗ, ಸಾಗರ ಇವರ ಮಾರ್ಗದರ್ಶನದಲ್ಲಿ ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಾದ ರಮೇಶ ಕೆ. ಹೆಚ್ ರವರು ಸಿಬ್ಬಂದಿಗಳೊಂದಿಗೆ ಮಂಗಳವಾರದಂದು ಸಂಜೆ ವೇಳೆಗೆ ತಾಲ್ಲೂಕಿನ ಮಳವಳ್ಳಿ ತಾಂಡಾದಲ್ಲಿ ಅಬಕಾರಿ ದಾಳಿ ನಡೆಸಿ, ಟೋಪಿಯನಾಯ್ಕ ಬಿನ್ ಪೀತ್ಯನಾಯ್ಕ ಎಂಬುವವರ ವಾಸದ  ಮನೆಯಲ್ಲಿ 01 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ 30 ಲೀಟರ್ ಬೆಲ್ಲದ ಕೊಳೆಯನ್ನು ವಶಪಡಿಸಿಕೊಂಡು ಅಬಕಾರಿ ಕಾಯ್ದೆ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಚಂದ್ರಪ್ಪ ಎಸ್. ಡಿ, ಸಿಬ್ಬಂದಿಗಳಾದ ಸಂತೋಷ್, ಮಂಜುನಾಥ್, ಹನುಮಂತಪ್ಪ ಹಾಗೂ ಕನಕಪ್ಪ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,745FollowersFollow
0SubscribersSubscribe
- Advertisement -spot_img

Latest Articles

error: Content is protected !!