ಶಿಕಾರಿಪುರ : ತಾಲ್ಲೂಕಿನ ಮೆಸ್ಕಾಂ ಗುತ್ತಿಗೆದಾರರಿಂದ ವಿವಿಧ ರೀತಿಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೆಸ್ಕಾಂ ಕಛೇರಿ ಎದುರು ಧರಣಿ ನಡೆಸುವುದರ ಮೂಲಕ ಭ್ರಷ್ಟ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಲಾಯಿತು.
ಮೆಸ್ಕಾಂ ಗುತ್ತಿಗೆದಾರರ ಹಲವು ಬೇಡಿಕೆಗಳಾದ 1 ರಿಂದ 5 ಲಕ್ಷದವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು, ಬೆಳಕು ಮತ್ತು ಎಲ್ ಸಿ ಬಿಲ್ಲುಗಳನ್ನು ವಿಭಾಗೀಯ ಕಚೇರಿಯಲ್ಲಿ ವಿಳಂಬವಾಗದಂತೆ ತ್ವರಿತವಾಗಿ ವಿಲೇವಾರಿ ಮಾಡಬೇಕು, ಉಗ್ರಾಣದಲ್ಲಿ ಸಾಮಗ್ರಿಗಳನ್ನು ಮತ್ತು ಪರಿವರ್ತನೆಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು, ಶೀಘ್ರ ಸಂಪರ್ಕ ಯೋಜನೆಯಡಿ ಗ್ರಾಹಕರಿಗೆ ಟಿ ಸಿ (ಟ್ರಾನ್ಸ್ಫಾರ್ಮರ್) ಯನ್ನು ಸ್ವಂತ ಖರ್ಚಿನಿಂದ ಖರೀದಿಸುವಂತೆ ಸೂಚಿಸುತ್ತಿರುವ ಬಗ್ಗೆ, ಲೈನ್ ಮ್ಯಾನ್ಗಳು ಮತ್ತು ಅಧಿಕಾರಿಗಳು ದೀರ್ಘಕಾಲದಿಂದ ಒಂದೇ ಕಡೆ ಕಾರ್ಯನಿರ್ವಹಿಸುತ್ತಿದ್ದು ಇಲಾಖೆ ಕೆಲಸ ಬಿಟ್ಟು ಗುತ್ತಿಗೆದಾರರಂತೆ ಕೆಲಸ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಹಿಂದಿನ ನೀರಾವರಿ ಪಂಪಸೆಟ್ನ ಡಿಫೆರೆಂಟ್ ಡಿಪಾಸಿಟ್, ಹಣವನ್ನು ಗುತ್ತಿಗೆದಾರರಿಂದ ಭರಿಸುವಂತೆ ಕೇಳಲಾಗುತ್ತಿದೆ ಇದನ್ನು ಸರಿಯಾದ ರೀತಿಯಲ್ಲಿ ಪರಿಗಣಿಸಬೇಕು. ಲೈಟಿಂಗ್ ವಿದ್ಯುತ್ ಸಂಪರ್ಕಕ್ಕೆ NOC ಕಡ್ಡಾಯಗೊಳಿಸಲಾಗಿದೆ ಮತ್ತು ಶಿರಾಳಕೊಪ್ಪ ಉಪ ವಿಭಾಗದಲ್ಲಿ ಹೆಚ್ಚುವರಿ ವಿದ್ಯುತ್ ಸಂಪರ್ಕಕ್ಕೆ NOC ಕೇಳುತ್ತಿರುವುದು, ಇಲಾಖೆ ಕಾಮಗಾರಿಗಳನ್ನು ಸಂಭಂಧಿಸಿದ ಅಧಿಕಾರಿಗಳು ತಮಗೆ ಬೇಕಾದ ಗುತ್ತಿಗೆದಾರರಿಗೆ ನೀಡುತ್ತಿರುವುದು ಸರಿಯಲ್ಲ. ವರ್ಕ ಯುನಿಟಿನಲ್ಲಿ ಗುತ್ತಿಗೆದಾರರ ಗಮನಕ್ಕೆ ಬಾರದಂತೆ ಇಂಡೆಂಟಗಳು ಮತ್ತು ಬಿಲ್ಗಳು ಪಾಸ್ ಆಗುತ್ತಿರುತ್ತಿದೆಯಲ್ಲದೆ, ಕಾಮಗಾರಿ ಮುಗಿಸಿದ ನಂತರ ಯುಟಿಲೈಜೇಷನ್ ನೀಡದೇ, ಕಾಮಗಾರಿಗಳನ್ನು ಸರಿಯಾಗಿ ಹಂಚಿಕೆ ಮಾಡಿಕೊಡದೇ ಅಧಿಕಾರಿಗಳು ಸ್ವತಃ ತಾವೇ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಹಾಗಾದರೆ ಗುತ್ತಿಗೆದಾರರಾಗಿ ನಾವೇಕೆ ಇರುವುದು ಎಂದು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಅನೇಕ ಗುತ್ತಿಗೆದಾರರು ಭಾಗವಹಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…