Categories: Shikaripura

‘ಚಿಣ್ಣ ಬಣ್ಣ’ ಮಕ್ಕಳಿಗಾಗಿ ಬೇಸಿಗೆ ರಂಗ ಶಿಬಿರ

ಶಿಕಾರಿಪುರ : ಆಧುನಿಕತೆಯ ಜೀವನದಲ್ಲಿ ಮಕ್ಕಳಿಗೆ ಮೊಬೈಲ್ ಘೀಳು  ಹೆಚ್ಚಾಗಿದ್ದು, ಇದರಿಂದಾಗಿ ನಮ್ಮ ದೇಶದಲ್ಲಿನ ಸಾಹಿತ್ಯ, ಜಾನಪದ ಕಲೆ, ಸಂಸ್ಕೃತಿ, ನಾಟಕ ಗ್ರಾಮೀಣ ಕ್ರೀಡೆಗಳು ಅವನತಿಯ ಹಾದಿ ಹಿಡಿಯುತ್ತಿದೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತರಾದ ನಾವು ಈಗಿನ ಪೀಳಿಗೆಗೆ ಇದನ್ನ ಪರಿಚಯಿಸಬೇಕು. ಹೀಗಾಗಿ  ತಾಲ್ಲೂಕಿನ ಗುಡಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕೇಂದ್ರದಿಂದ ಮಕ್ಕಳಿಗಾಗಿ ಚಿಣ್ಣ ಬಣ್ಣ ಕಾರ್ಯಕ್ರಮದಡಿ ಬೇಸಿಗೆ ರಂಗ ಶಿಬಿರ ಏರ್ಪಡಿಸಲಾಗಿದ್ದು ಆಸಕ್ತರು ಕೂಡಲೆ ತಮ್ಮ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳ ಬೇಕು ಎಂದು ಗುಡಿ ಸಂಸ್ಕೃತಿ ವೇದಿಕೆಯ ಸಂಸ್ಥಾಪಕ ಇಕ್ಬಾಲ್ ಅಹ್ಮದ್ ಕರೆ ನೀಡಿದರು. 

ಸೋಮವಾರ ಪಟ್ಟಣದ ಸುದ್ದಿಮನೆಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಇದೇ ಏ. 10 ರಿಂದ 30 ರವರೆಗೆ ಪಟ್ಟಣದ ಪೌರವಿಹಾರದ ಮುಂಭಾಗದ ಕೆ ಹೆಚ್ ಬಿ ಲೇಔಟ್ ಬಳಿ ಇರುವ ಗುಡಿ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ 06 ರಿಂದ 17 ವರ್ಷದ ಮಕ್ಕಳಿಗಾಗಿ ಗುಡಿ ಸಂತೆ ಎಂಬ ಕಾರ್ಯಕ್ರಮವನ್ನು 21 ದಿನಗಳವರೆಗೆ ಬೆಳಗ್ಗೆ 9 – 00 ಗಂಟೆಯಿಂದ ಸಂಜೆ 5 – 00 ಗಂಟೆವರೆಗೆ ಶಿಬಿರಗಳು  ಏರ್ಪಡಿಸಲಾಗಿದ್ದು, ಇಲ್ಲಿ ಚಿಣ್ಣರಿಗಾಗಿ ರಂಗಭೂಮಿಯ ಅಭಿನಯ, ರಂಗಾಟುಗಳು, ಯಕ್ಷಗಾನ, ಮೂಕಾಭಿನಯ,  ರಂಗಗೀತೆಗಳು,ಕರಕುಶಲ ತಯಾರಿಕೆ ಜಾನಪದ ಹಾಡು ಮತ್ತು ನೃತ್ಯ, ಬರಿಗಣ್ಣಿನಿಂದ  ಆಕಾಶ ವೀಕ್ಷಣೆ ಸೇರಿದಂತೆ ಹಲವು  ಮಕ್ಕಳಿಂದ ತಯಾರಾದ ಕರಕುಶಲ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ನಡೆಸಲಾಗುವುದು ಎಂದರು. 

ಗುಡಿ ಸಾಂಸ್ಕೃತಿಕ ಕೇಂದ್ರದಿಂದ ಕಳೆದ ಚಿಕ್ಕಮಕ್ಕಳಿಗಾಗಿ ಪ್ರತೀ ವರ್ಷ ಶಿಬಿರ ನಡಸಲಾಗುತ್ತಿದ್ದು, ಇದು16 ನೇ ವರ್ಷದ French ಶಿಬಿರವಾಗಿದೆ. ಇದರಲ್ಲಿ ನೀ ನಾ ಸಂ ನ ಕಲಾವಿದರು, ವಿವಿಧ ಕಲೆಗಳ ಬಗ್ಗೆ ಹಿರಿಯ ತರಭೇತಿದಾರರು ತರಭೇತಿ ನೀಡಲಿದ್ದಾರಲ್ಲದೇ, ಮಣ್ಣಿನಿಂದ ವಿವಿಧ ರೀತಿಯ ಗೊಂಬೆಗಳ ತಯಾರಿಕೆ, ಚಿತ್ರಕಲೆ, ಗಾಯನ ತರಬೇತಿ ಹೀಗೆ ಹಲವು ರೀತಿಯ ಕಲೆಯನ್ನು ಕಲಿಸಲಾಗುತ್ತದೆ. ಕೊರೋನ ಹಿನ್ನೇಲೆಯಿಂದ ಎರಡು ವರ್ಷಗಳ ಕಾಲ ಸ್ಥಗಿತ ಗೊಳಿಸಲಾಗಿತ್ತು. ಈ ಹಿಂದೆ ನಮ್ಮ ಕೇಂದ್ರದಲ್ಲಿಯೇ ಶಿಬಿರಾರ್ಥಿಗಳಿಗೆ ತಿಂಡಿ ಊಟದ ವ್ಯವಸ್ಥೆ ಮಾಡಲಾಗುತ್ತಿತ್ತು ಆದರೆ, ಆಹಾರವನ್ನು ಹಂಚಿತಿನ್ನುವ ಪದ್ಧತಿಯನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಈ ವರ್ಷದಿಂದ ಶಿಬಿರದಲ್ಲಿ ಭಾಗವಹಿಸುವ ಮಕ್ಕಳ ಪೋಷಕರೇ ವಿಶೇಷ ರೀತಿಯ ಖಾದ್ಯಗಳನ್ನು ತಯಾರಿಸಿ ತಂದು ಮಕ್ಳಳಿಗೆ ಹಂಚಿ ತಿನ್ನುವ ಅವಕಾಶ ಕಲ್ಪಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ  ಮೊಬೈಲ್ ಸಂಖೆ 8073169825, 9019518738, 9739489730, 8495823749 ಇವುಗಳಿಗೆ ಸಂಪರ್ಕಿಸಬೇಕೆಂದು ತಿಳಿಸಿದರು.

ಗೋಷ್ಠಿಯಲ್ಲಿ ಗುಡಿ ಸಾಂಸ್ಕೃತಿಕ ಕೇಂದ್ರದ ಸಂಚಾಲಕ ಕೆ ಎಸ್ ಹುಚ್ರಾಯಪ್ಪ, ಶಿಬಿರದ ಉಸ್ತುವಾರಿ ನಾಗರಾಜ್ ಇದ್ದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

3 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

5 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

6 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

7 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

8 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

10 hours ago