Categories: Shikaripura

ಜೂ. 9ರಂದು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ36 ಅಡಿ ಎತ್ತರದ ರೇಣುಕಾಚಾರ್ಯ ಮೂರ್ತಿ ನಿರ್ಮಾಣ ಕಾರ್ಯದ ಚಾಲನಾ ಸಮಾರಂಭ

ಶಿಕಾರಿಪುರ : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ದಿನಾಂಕ 9-6-2023 ಶುಕ್ರವಾರದಂದು ತಪೋಕ್ಷೇತ್ರ ಕಡೇನಂದಿಹಳ್ಳಿ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಬೃಹಸ್ಪತಿ ಹೋಮ, ಶಿವಾನುಷ್ಠಾನ ಮಂದಿರ ಶಿಲಾಮಂಟಪದ ಮೇಲೆ 36 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ನಿರ್ಮಾಣ ಕಾರ್ಯ ಚಾಲನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಪ್ರಾತಃಕಾಲದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರು ಇಷ್ಟಲಿಂಗ ಪೂಜೆ ನಡೆಸುವರು.


ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಧರ್ಮ ಸಮಾರಂಭ ಉದ್ಘಾಟಿಸಿ ಮೂರ್ತಿ ನಿರ್ಮಾಣಕ್ಕೆ ಚಾಲನೆ ನೀಡುವರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ವೈ.ವಿಜಯೇಂದ್ರ, ಯು.ಬಿ.ಬಣಕಾರ ಇವರಿಗೆ ಗೌರವ ಗುರುರಕ್ಷೆ ನೀಡಲಾಗುವುದು. ಮುಖ್ಯ ಅತಿಥಿಗಳಾಗಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಹಾಗೂ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರುಗಳು ಹಾಗೂ ರಾಜಕೀಯ ಧುರೀಣರು ಪಾಲ್ಗೊಳ್ಳುವರು. ದುಗ್ಲಿ-ಕಡೇನಂದಿಹಳ್ಳಿ ಕ್ಷೇತ್ರದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು, ಕನ್ನೂರು-ಸಿಂಧನೂರು ಗುರುಮಠದ ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು, ಚನ್ನಗಿರಿಯ ಕೇದಾರ ಶಿವಶಾಂತವೀರ ಶಿವಾಚಾರ್ಯ ಸ್ವಾಮಿಗಳು, ಸಿಗಂಧೂರು ಕ್ಷೇತ್ರದ ಧರ್ಮದರ್ಶಿ ಡಾ.ರಾಮಪ್ಪ, ನೀಲಗೋಡು ಯಕ್ಷಿ ಚೌಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಮಾದೇವ ಸ್ವಾಮಿ, ಹಾರನಹಳ್ಳಿ ಶ್ರೀ ಶನೈಶ್ವರಸ್ವಾಮಿ ಕ್ಷೇತ್ರದ ಧರ್ಮದರ್ಶಿ ಹನುಮಂತಪ್ಪ ಸ್ವಾಮಿಗಳು ಉಪಸ್ಥಿತರಿರುವರು.


ಶ್ರೀ ಗುರು ರೇವಣಸಿದ್ಧೇಶ್ವರ ಜನಕಲ್ಯಾಣ ಟ್ರಸ್ಟ್ ಸಲಹಾ ಮತ್ತು ಸೇವಾ ಸಮಿತಿ, ಶ್ರೀ ಗುರು ರೇವಣಸಿದ್ಧೇಶ್ವರ ಯುವಕ ಮಂಡಳಿ ಪದಾಧಿಕಾರಿಗಳು, ಕಡೇನಂದಿಹಳ್ಳಿ-ದುಗ್ಲಿ ಮತ್ತು ಸುತ್ತಲಿನ ಗ್ರಾಮಗಳ ಸದ್ಭಕ್ತರುಗಳು ಸಮಾರಂಭಕ್ಕೆ ಸಹಕಾರ ನೀಡಲಿರುವರು. ಶ್ರೀ ಮಠದ ಪುರೋಹಿತ ಬಳಗದಿವರಿಂದ ವೈದಿಕ ಸೇವೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಮಠದ ಪ್ರಕಟಣೆ ತಿಳಿಸಿದೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

11 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

14 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

15 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

19 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

21 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago