Categories: Shikaripura

ಮುಸ್ಲಿಮರಿಗೆ ಯಾವುದೇ ರೀತಿ ಸೌಲಭ್ಯಗಳನ್ನು ನೀಡಿಲ್ಲ ಎಂದು ತಿಳಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ; ಬಿಎಸ್‌ವೈ

ಶಿಕಾರಿಪುರ : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಿಂದೂ ಧರ್ಮದವರಿಗೆ ಎಲ್ಲಾ ಜನಾಂಗದವರಿಗೆ ಸೌಲಭ್ಯ ನೀಡಿದಂತೆ ಅಲ್ಪಸಂಖ್ಯಾತರಿಗೂ ಸೌಲಭ್ಯ ನೀಡಿದ್ದೇನೆ. ಒಂದು ವೇಳೆ ಮುಸ್ಲಿಮರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ ಎಂದು ತಿಳಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಘಂಟಾಘೋಷವಾಗಿ ಸಾರಿದ್ದಾರೆ.

ಪಟ್ಟಣದ ಕುಮುದ್ವತಿ ಬಿಎಡ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯೇಂದ್ರನನ್ನು ರಾಜ್ಯದ ಯಾವುದೇ ಮೂಲೆಯಲ್ಲಿ ಕಣಕ್ಕಿಳಿಸಿದರೂ ಅವರು ಗೆಲ್ಲುವಂತಹ ನಾಯಕತ್ವ ಅವರಲ್ಲಿದೆ. ಆದರೂ ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕೆಂಬ ಕಾರ್ಯಕರ್ತರ ಅಪೇಕ್ಷೆ ಹಾಗೂ ನಾಯಕರ ಒತ್ತಡಕ್ಕೆ ನಾನು ಸ್ಪಷ್ಟೀಕರಣವನ್ನು ನೀಡಿದ್ದು ವಿಜಯೇಂದ್ರರನ್ನು ನನ್ನ ಕರ್ಮ ಭೂಮಿ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಿದ್ದೇನೆ. ನಾನು ಹಿಂದೂ ಮುಸ್ಲಿಂ ಎನ್ನದೆ ಕಾರ್ಯಕ್ರಮಗಳನ್ನು ಕೊಟ್ಟಿದ್ದು, ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ಕೇವಲ ಹಿಂದುಗಳಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇನೆ ಎನ್ನುವುದನ್ನು ಎಂದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಯಾವುದೇ ಜಾತಿ, ಮತ, ಧರ್ಮ, ಎನ್ನದೆ ಎಲ್ಲ ಸಮುದಾಯಗಳಿಗೂ ಕಾರ್ಯಕ್ರಮಗಳನ್ನು ನೀಡಿದ್ದು ನಿಮ್ಮ ಅಪೇಕ್ಷೆಯಂತೆ ಅಭಿವೃದ್ಧಿ ಕಾರ್ಯವನ್ನು ಮಾಡಿದ್ದೇನೆ. ತಾಲ್ಲೂಕಿನ ಜನತೆಯ ಆಶೀರ್ವಾದದಿಂದ ಅವರ ಅಪೇಕ್ಷೆಯಂತೆ ಶಿವಶರಣರ ನಾಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ನೀರಾವರಿ ಕಾರ್ಯಗಳನ್ನು ಮಾಡಿದ ತೃಪ್ತಿ ನನಗಿದೆ  ಎಂದರು .

ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿದ್ದ ನಾನು ಆ ಪಟ್ಟಿಯನ್ನು ವರಿಷ್ಠರಿಗೆ ಇಂದು ತಲುಪಿಸಬೇಕಿತ್ತು. ಅನಿವಾರ್ಯವಾಗಿ ಬರಬೇಕಾದ ಪ್ರಸಂಗ ಬಂತು. ರಾಜ್ಯದಲ್ಲಿ ಬಿಜೆಪಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ವಿಜೇಂದ್ರರವರು ಪ್ರತಿ ಜಿಲ್ಲೆ ತಾಲ್ಲೂಕುಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಆದ ಕಾರಣ ತಾಲ್ಲೂಕಿನ ಜನತೆ ನನಗೆ ಹಾಗೂ ರಾಘವೇಂದ್ರರವರಿಗೆ ಯಾವ ರೀತಿಯಲ್ಲಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳಿಸಿದ್ದೀರೋ ಅದೇ ರೀತಿಯಲ್ಲಿ ನಿಮ್ಮ ಮಗನೆಂದು ವಿಜೇಂದ್ರರವರಿಗೆ 50 ಸಾವಿರಕ್ಕೂ ಅಧಿಕ ಮತಗಳಿಂದ ಅವರನ್ನು ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಸಂಸದ ಬಿ ವೈ ರಾಘವೇಂದ್ರ ಮಾತನಾಡಿ, ಬಿ ಎಸ್ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿದ್ದಾಗ ಶಿಕಾರಿಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಪಕ್ಷಾತೀತವಾಗಿ ಜಾತ್ಯತೀತವಾಗಿ ಎಲ್ಲಾ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ. ಇವರು ನೀಡಿದ ಹಲವಾರು ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಜನರಿಗೆ ತಿಳಿಸುವ ಮೂಲಕ ವಿಜೇಂದ್ರರವರಿಗೆ 50 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸುವ ಕೆಲಸ ಮಾಡಬೇಕಾಗಿದೆ ಎಂದು ಕರೆ ನೀಡಿದರು.

ಬಿ ವೈ ವಿಜಯೇಂದ್ರ ಮಾತನಾಡಿ, ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ತಾಲೂಕು ಎಂದು ನಮೂದಾಗಿದ್ದ ಶಿಕಾರಿಪುರ ಇಂದು ರಾಜ್ಯದಲ್ಲಿಯೇ ಮಾದರಿ ತಾಲೂಕಾಗಿದೆ, ಇದಕ್ಕೆ ಕಾರಣ ತಾವು ಬಿ.ಎಸ್. ಯಡಿಯೂರಪ್ಪನವರನ್ನು ಇಲ್ಲಿಂದ ಶಾಸಕರನ್ನಾಗಿ ಆಯ್ಕೆ ಮಾಡಿ ವಿರೋಧ ಪಕ್ಷದ ನಾಯಕರನ್ನಾಗಿ, ಮುಖ್ಯಮಂತ್ರಿಯನ್ನಾಗಿಸಿದ್ದು. ಮುಂದೆ ತಂದೆಯವರ ಆಶಯದಂತೆ ಈ ತಾಲ್ಲೂಕಿನ ಇನ್ನಷ್ಟು ಅಭಿವೃದ್ಧಿ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ನನಗೆ ಆಶೀರ್ವಾದಿಸಬೇಕು ಎಂದು ಮನವಿ ಮಾಡಿದರು.

ರಂಜಾನ್ ಈ  ಸಂದರ್ಭದಲ್ಲಿ ತಾವು ಉಪವಾಸ ಇದ್ದಾಗ್ಯೂ  ಯಡಿಯೂರಪ್ಪನವರನ್ನು ಕಾಣಲು ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಅದಕ್ಕೆ ನಾವು ಆಭಾರಿಗಳಾಗಿದ್ದೇವೆ ಎಂದರು.

ಕೃಷಿ ಸಚಿವ ಬಿಸಿ ಪಾಟೀಲ್ ಮಾತನಾಡಿ, ಕೇಂದ್ರ ಸರ್ಕಾರ 6000 ರೂ.ಗಳನ್ನು ಹಾಗೂ ರಾಜ್ಯ ಸರ್ಕಾರ 4000 ರೂ. ರೈತರಿಗೆ ನೀಡುತ್ತಿದ್ದು ಒಟ್ಟು 53 ಲಕ್ಷ ರೈತರಿಗೆ ತಲಾ ಹತ್ತು ಸಾವಿರ ರೂಪಾಯಿ ಅವರ ಖಾತೆಗೆ ಜಮಾ ಆಗುತ್ತದೆ ಇದು ಬಿಜೆಪಿಯ ಕೊಡುಗೆ. 1250 ರೂಪಾಯಿಗಳನ್ನು ರೈತ ಶಕ್ತಿ ಯೋಜನೆ ಅಡಿಯಲ್ಲಿ ರೈತರಿಗೆ ಡೀಸೆಲ್ ಸಹಾಯಧನವಾಗಿ ನೀಡುತ್ತಿದ್ದು ಇದು ಬಿಜೆಪಿ ಸರ್ಕಾರದ ಹೆಮ್ಮೆ ಎಂದರು.

ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜೀವ್ ಕುಡುಚಿ ಮಾತನಾಡಿ, ಶಿಕಾರಿಪುರದ ಪ್ರತಿ ಮತದಾರನು ವಿಜಯೇಂದ್ರನಿಗೆ ನೀಡುವ ಪ್ರತಿಯೊಬ್ಬರ ಮತವು ಬಿಎಸ್‌ವೈ ರವರ 45 ವರ್ಷಗಳ ಅವಿರತ ಹೋರಾಟದ ಪ್ರತಿಫಲವನ್ನು ಅವರಿಗೆ ನೀಡುತ್ತಿರುವುದು, ಈ ನೆಲದ ಅಸ್ಮಿತೆಯನ್ನು ಕಾಪಾಡುವ ಜವಾಬ್ದಾರಿ ಈ ನೆಲದ ಮತದಾರರ ನಿಮ್ಮ ಮೇಲಿದೆ ಎಂದರು.

ಈ‌ ಸಂದರ್ಭದಲ್ಲಿ ಕೆ.ಎಸ್ ಗುರುಮೂರ್ತಿ ವಿಧಾನ ಪರಿಷತ್ ಸದಸ್ಯ ರುದ್ರಗೌಡ, ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ಡಿ ಮೇಘರಾಜ್, ಎಚ್.ಟಿ ಬಳೆಗಾರ, ಕೆ ಹಾಲಪ್ಪ, ಬಿ.ಡಿ.ಭೂಕಾಂತ್, ಎಂ.ಬಿ. ಚನ್ನವೀರಪ್ಪ ಮುಂತಾದವರು ಭಾಗವಹಿಸಿದ್ದರು.

“ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ  ರಾಮಾನಾಯ್ಕ್ ಅಧ್ಯಕ್ಷತೆಯಲ್ಲಿ ಬಣಜಾರ ಸಮುದಾಯದ ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಇತ್ತೀಚೆಗೆ ಒಳ ಮೀಸಲಾತಿ ಸೌಲಭ್ಯಕ್ಕಾಗಿ ಪ್ರತಿಭಟನೆ ನಡೆಸಿ ಬಿ ಎಸ್ ಯಡಿಯೂರಪ್ಪರವರ ಮನೆ ಮೇಲೆ ಕಲ್ಲು ತೂರಾಟದಂತಹ ಘಟನೆ ನಡೆದ ಕಾರಣಕ್ಕೆ ಬಿಎಸ್‌ವೈ ರವರಿಗೆ ಮತ್ತು ಅವರ ಕುಟುಂಬದವರಿಗೆ ಬೇಸರವಾಗಿದೆ ಎಂದು ಮಾಧ್ಯಮದವರೊಂದಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಬಿಎಸ್‌ವೈ ರವರ ಮತ್ತು ಅವರ ಕುಟುಂಬದವರಿಗೆ ಮನವೊಲಿಸಿ ಅವರನ್ನು ಶಾಂತಿಪಡಿಸುವುದಕ್ಕಾಗಿಯೋ ಅಥವಾ ಏನೇ ಆದರೂ ನಾವು ನಿಮ್ಮ ಜೊತೆಗಿದ್ದೇವೆ ಎಂಬ ಸಂದೇಶ ಸಾರುವುದಕ್ಕಾಗಿಯೋ ಕೆಲವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂಬ ಮಾತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನತೆಯಿಂದ ಕೇಳಿಬಂದಿದೆ.”

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

7 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

13 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

21 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago