Categories: Shikaripura

ಲಂಚಕ್ಕೆ ಬೇಡಿಕೆಯಿಟ್ಟ ಗ್ರಾ.ಪಂ. ಪಿಡಿಓ ಲೋಕಾಯುಕ್ತ ಬಲೆಗೆ !

ಶಿಕಾರಿಪುರ : ತಾಲೂಕಿನ ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ ಎಂಬುವವರ ಮನೆಯು 2021ರ ಮಹಾ ಮಳೆಯಿಂದ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಬಿದ್ದ ಕಾರಣ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಜಿಪಿಎಸ್‍ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು ಬಗನಕಟ್ಟೆ ಗ್ರಾಮ ಪಂಚಾಯತಿ ಪಿಡಿಓ (PDO) ಮಂಜುನಾಥನವರು ಸಾಕಮ್ಮರವರಿಂದ 20 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆಯಿಟ್ಟು, ಅದರಲ್ಲಿ ರೂ. 13 ಸಾವಿರ ಪಡೆದು ಬಾಕಿ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.


ಸಾಕಮ್ಮರವರಿಗೆ ಮನೆಯ ಪುನರ್ ನಿರ್ಮಾಣ ಕಾರ್ಯಕ್ಕೆ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ರೂ. 5 ಲಕ್ಷಗಳ ಪರಿಹಾರ ಧನ ಮಂಜೂರಾಗಿದ್ದು, ಮನೆಯ ಪುನರ್ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ನೆರೆ ಸಂತ್ರಸ್ಥರ ಪುನರ್ ವಸತಿ ಯೋಜನೆಯಂತೆ ಕಂತಿನ ಹಣ ರೂ. 1.00 ಲಕ್ಷಗಳನ್ನು ಬಿಡುಗಡೆ ಮಾಡಲು ಸಂಬಂಧ ಪಿ.ಡಿ.ಓ ಮಂಜುನಾಥ ಮತ್ತೊಮ್ಮೆ ರೂ. 6 ಸಾವಿರ ಗಳ ಲಂಚಕ್ಕೆ ಬೇಡಿಕೆಯಿಟ್ಟಿರುತ್ತಾರೆ. ಸಾಕಮ್ಮನವರು ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ದೂರ ಕೊಟ್ಟ ಮೇರೆಗೆ ನ. 15 ರಂದು ಪ್ರಕರಣ ದಾಖಲಾಗಿರುತ್ತದೆ.
ನ. 16 ರಂದು ಬಗನಕಟ್ಟೆ ಗ್ರಾ.ಪಂ. ಪಿಡಿಓ ಮಂಜುನಾಥ ಇವರು ಸಾಕಮ್ಮರವರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ, ಲಂಚದ ಹಣ ರೂ. 6 ಸಾವಿರ ವಶಪಡಿಸಿಕೊಂಡು, ಪೊಲೀಸ್ ನಿರೀಕ್ಷಕ ಪ್ರಕಾಶ್‍ರವರು ಮುಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ.


ಶಿವಮೊಗ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಹೆಸ್.ಎಸ್. ಸುರೇಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಎಸ್.ಕೆ. ಪ್ರಸನ್ನ ಸಿ.ಹೆಚ್.ಸಿ, ಮಹಂತೇಶ ಸಿ.ಹೆಚ್.ಸಿ., ಬಿ.ಟಿ ಚನ್ನೇಶ ಸಿ.ಪಿ.ಸಿ., ಪ್ರಶಾಂತ್ ಕುಮಾರ್ ಸಿ.ಪಿ.ಸಿ., ರಘುನಾಯ್ಕ ಸಿ.ಪಿ.ಸಿ., ಸುರೇಂದ್ರ ಸಿ.ಪಿ.ಸಿ., ಅರುಣ್ ಕುಮಾರ್ ಸಿ.ಪಿ.ಸಿ., ದೇವರಾಜ್, ಸಿ.ಪಿ.ಸಿ., ಪುಟ್ಟಮ್ಮ ಮ.ಪಿ.ಸಿ., ಪ್ರದೀಪ್‍ಕುಮಾರ್, ಎ.ಪಿ.ಸಿ., ತರುಣ್ ಕುಮಾರ್ ಎಪಿಸಿ., ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Malnad Times

Share
Published by
Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

4 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

4 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

5 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

5 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

7 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

10 hours ago