Categories: Shikaripura

Karnataka Assembly Election 2023 | ಗಡಿ ಭಾಗಗಳಲ್ಲಿ 4 ಚೆಕ್ ಪೋಸ್ಟ್ ತೆರೆಯಲಾಗಿದೆ ; ಶಿಕಾರಿಪುರ ತಾಲೂಕು ಚುನಾವಣಾಧಿಕಾರಿ ನಾಗೇಶ್ ಎ ರಾಯ್ಕರ್

ಶಿಕಾರಿಪುರ : ಈಗಾಗಲೇ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಘೋಷಿಸಿರುವಂತೆ ಮೇ 10 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಇದಕ್ಕೆ ಪೂರಕವಾಗಿ ಸುಲಲಿತ ಮತ್ತು ಪಾರದರ್ಶಕ ಚುನಾವಣೆಗಾಗಿ  ತಾಲ್ಲೂಕಿನಲ್ಲಿ ಅಂತರ್ ಜಿಲ್ಲಾ ಗಡಿಭಾಗಗಳಲ್ಲಿ ನಾಲ್ಕು ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಾಲ್ಲೂಕು ಚುನಾವಣಾಧಿಕಾರಿ ನಾಗೇಶ್ ಎ ರಾಯ್ಕರ್ ತಿಳಿಸಿದರು.

ಶುಕ್ರವಾರ ತಾಲ್ಲೂಕು ಕಛೇರಿಯ ಚುನಾವಣಾ ಕಛೆರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏಪ್ರಿಲ್ 13 ರಿಂದ  ಉಮೇದುವಾರಿಕೆ ಅರ್ಜಿಗಳನ್ನು ಪಡೆಯಲಾಗುವುದು, ಏ. 20 ಉಮೇದುವಾರಕ್ಕೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಏ. 21 ರಂದು ಉಮೇದುವಾರಿಕೆ ಅರ್ಜಿಗಳ ಪರಿಶೀಲನೆ ನಡೆಯಲಿದ್ದು, ವಾಪಾಸು ಪಡೆಯಲು ಏ. 24 ಕೊನೆ ದಿನವಾಗಿರುತ್ತದೆ‌. ಮೇ 10 ರಂದು ಮತದಾನ ನಡೆಯಲಿದ್ದು ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ.

ತಾಲ್ಲೂಕಿನಲ್ಲಿ ಒಟ್ಟು 195371 ಮತದಾರರಿದ್ದು, ಈ ಪೈಕಿ 98,181 ಪುರುಷರು, 97086 ಮಹಿಳೆಯರು ಹಾಗೂ 4 ಜನ ಇತರ ಮತದಾರರು ಹಾಗೂ 75 ಸೇವಾ ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ 232 ಸಾಮಾನ್ಯ ಮತಗಟ್ಟೆ, 4 ಹೆಚ್ಚುವರಿ ಮತಗಟ್ಟೆ ಸೇರಿ ಒಟ್ಟು 236 ಮತದಾನದ ಕೇಂದ್ರಗಳಿದ್ದು, ರಾಜ್ಯ ಚುನಾವಣೆ ನಿರ್ದೇಶನಂತೆ ಸುಲಲಿತ ಚುನಾವಣಾ ನಿರ್ವಹಣೆಗಾಗಿ ಮೂರು ಎಂಸಿಸಿ ತಂಡಗಳನ್ನು ಒಬ್ಬ  ಸಹಾಯಕ ವೀಕ್ಷಕರು ಹಾಗೂ 15 ಸಂಚಾರಿ ಸ್ಕ್ವಾಡ್  ತಂಡವನ್ನು 12 ಸ್ಥಿರ ಕಣ್ಗಾವಲು ತಂಡಗಳನ್ನು ಏಳು ವಿಡಿಯೋ ತಂಡಗಳನ್ನು ಹಾಗೂ ಒಂದು ವಿಡಿಯೋ ಮಾನಿಟರ್ ಕೇಂದ್ರವನ್ನು ತೆರೆಯಲಾಗಿದೆ ಎಂದರು.

ಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ನೂತನ ತಹಶೀಲ್ದಾರ್ ಶಂಕ್ರಪ್ಪ ಜಿ ಎಸ್, ಹಂಗಾಮಿ ತಹಶೀಲ್ದಾರ್ ವಿಶ್ವನಾಥ ಮರಡಿ, ಚುನಾವಣಾ ಶಾಖೆ ಶಿರಸ್ತೇದಾರ್ ಸುಧೀರ್ ಹೆಚ್ ಎಸ್ ಇದ್ದರು.

Malnad Times

Recent Posts

ದತ್ತಪೀಠದಲ್ಲಿ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿದ ಪ್ರವಾಸಿ ಬಸ್ ! ಬಾಲಕ ಸಾವು

ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…

4 hours ago

ರಂಭಾಪುರಿ ಶ್ರೀಗಳ ಮೇ ತಿಂಗಳ ಪ್ರವಾಸ ಕಾರ್ಯಕ್ರಮ ವಿವರ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…

4 hours ago

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

6 hours ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

9 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

9 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

16 hours ago