ಪೆಟ್ರೋಲ್ ಬಂಕ್ ಸಮೀಪವೇ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ ; ತಪ್ಪಿತು ಭಾರಿ ಅನಾಹುತ

0 45

ಶಿವಮೊಗ್ಗ: ಪೆಟ್ರೋಲ್ ಬಂಕ್ ಸಮೀಪವೇ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಹೊರವಲಯದ ಒಡ್ಡಿನಕೊಪ್ಪ ಕ್ರಾಸ್ ನಲ್ಲಿ ನಡೆದಿದೆ.

ಮಾಚೇನಹಳ್ಳಿಯಿಂದ ಇಂಡೇನ್ ಅಡುಗೆ ಅನಿಲ ಸಿಲಿಂಡರ್ ಗಳನ್ನು ತುಂಬಿಕೊಂಡು ಎನ್.ಆರ್.ಪುರಕ್ಕೆ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪೆಟ್ರೋಲ್ ಬಂಕ್ ಎದುರಲ್ಲಿಯೇ ಸಿಲಿಂಡರ್ ಗಳು ರಸ್ತೆಗೆ ಉರುಳಿ ಬಿದ್ದು ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಕೂಡ ಧಾವಿಸಿ ಬಂದು ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ. ರಸ್ತೆಯಲ್ಲಿ ಉರುಳಿ ಬಿದ್ದ ಸಿಲಿಂಡರ್ ಗಳನ್ನು ರಸ್ತೆ ಬದಿಯಲ್ಲಿ ಜೋಡಿಸಿ ಬೇರೆ ಲಾರಿಗೆ ಲೋಡ್ ಮಾಡಿ ಕಳುಹಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

Leave A Reply

Your email address will not be published.

error: Content is protected !!