ಅನ್ಯ ಕೋಮಿನ ಯುವಕರಿಂದ ಆಟೋ ಜಖಂ ಮಾಡಿ ಚಾಲಕನ ಮೇಲೆ ಹಲ್ಲೆ ; ಕೆಎಸ್ಈ ಕಾಲಿಗೆ ಬಿದ್ದು ರಕ್ಷಣೆ ಕೋರಿಕೆ

ಶಿವಮೊಗ್ಗ : ಸೋಮಿನಕೊಪ್ಪದಲ್ಲಿ ಇಂದು ಬೆಳಿಗ್ಗೆ ದುಶ್ಕರ್ಮಿಗಳು ಹರೀಶ್‌ರಾವ್ ಎಂಬ ಆಟೋ ಚಾಲಕನನ್ನು ಥಳಿಸಿ ಆಟೋ ಜಖಂಗೊಳಿಸಿದ್ದು, ತೀವ್ರ ಗಾಯಗೊಂಡ ಆತನನ್ನು ಆತನ ಸ್ನೇಹಿತ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರೆದುಕೊಂಡು ಬಂದು ದೂರು ನೀಡಿದ್ದಾರೆ.

ಆಟೋ ಚಾಲಕ ಹರೀಶ್ ರಾವ್‌ನನ್ನು ಮತದಾನಕ್ಕೆ ಸಂಬಂಧಿಸಿದಂತೆ‌ ಸ್ಥಳೀಯರಾದ ಡಬ್ಬ ಅಲಿಯಾಸ್ ನಜರು, ಇಡ್ಲಿ ಅಲಿಯಾಸ್ ಅಬ್ರಾರ್ ಹಾಗೂ ಇನ್ನೋರ್ವ ಹಲ್ಲೆ ಮಾಡಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಹರೀಶ್ ರಾವ್ ಆರೋಪಿಸಿದ್ದಾರೆ. ದೂರು ನೀಡಲು ಬಂದಾಗ ಸ್ಥಳದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು ಇದ್ದುದರಿಂದ ಆತ ಈಶ್ವರಪ್ಪನವರ ಕಾಲಿಗ ಬಿದ್ದು ರಕ್ಷಣೆ ನೀಡುವಂತೆ ಕೋರಿದ್ದಾರೆ. ತಕ್ಷಣ ಈಶ್ವರಪ್ಪನವರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ, ಆಟೋ ಚಾಲ ಕನಿಗೆ ರಕ್ಷಣೆ ನೀಡಿ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Articles

error: Content is protected !!