ಶಿವಮೊಗ್ಗ: ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಕೊನೆಯ ಬಜೆಟ್ ಮಂಡಿಸಿದ್ದು, ಎಲ್ಲ ವರ್ಗಗಳು, ಕ್ಷೇತ್ರಗಳು ಹಾಗೂ ಜಿಲ್ಲೆಗಳನ್ನು ತೃಪ್ತಿಪಡಿಸುವ ಪ್ರಯತ್ನವನ್ನು ಮಾಡಲಾಗಿದೆ.
ಈ ಬಾರಿಯ ಬಜೆಟ್ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆಗೆ ಏನೆಲ್ಲಾ ಸಿಕ್ಕಿದೆ ಗೊತ್ತಾ ? ಇಲ್ಲಿದೆ ನೋಡಿ.
- ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಕ್ಕೆ 10 ಕೋಟಿ. ರೂ ಅನುದಾನ.
- ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ (ಶಿವಮೊಗ್ಗ, ಮೈಸೂರು ಹಾಗೂ ಕಲಬುರಗಿಗೆ ಸೇರಿ 202 ಕೋಟಿ ರೂ. ಅನುದಾನ).
- 18 ಕೋಟಿ ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ ಆರಂಭ.
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ತಾತ್ಕಾಲಿಕ ವಸತಿ ಗೃಹ ನಿರ್ಮಾಣ.
- ಶಿವಮೊಗ್ಗ-ಶಿಕಾರಿಪುರ ರೈಲು ಮಾರ್ಗಕ್ಕೆ 150 ಕೋಟಿ ರೂ. ಅನುದಾನ.
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಲೈಟ್ ಕಾರ್ಗೋ ಟ್ರಾನ್ಸ್ಪೋರ್ಟ್ ಬೋಟ್ ಸೇವೆ ಆರಂಭ.
- ಭಾರೀ ವಾಹನ ಚಾಲಕರ ತರಬೇತಿಗಾಗಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ (ಸಾಗರದಲ್ಲಿ).