ರಾಷ್ಟ್ರೀಯ ಯುವ ಸಂಸತ್ತು ; ರಾಜ್ಯ ಮಟ್ಟಕ್ಕೆ ಆಯ್ಕೆ

0 50


ಶಿವಮೊಗ : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ರಾಷ್ಟ್ರೀಯ ಯುವ ಸಂಸತ್ತು-2023 ಪ್ರಯುಕ್ತ ಫೆ.1 ರಂದು ಉಡುಪಿಯಲ್ಲಿ ವರ್ಚುವಲ್ ವೇದಿಕೆ ಮೂಲಕ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ಕು.ಶಾಲಿನಿ ಎಸ್ ಪ್ರಥಮ ಮತ್ತು ಕು.ಸಿಂಚನ ನಾಯಕ್ ದ್ವಿತೀಯ ಸ್ಥಾನ ಪಡೆದಿದ್ದು ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ದೆಹಲಿಯ ಸಂಸತ್ತಿನಲ್ಲಿ ಮಾತನಾಡುವ ಅವಕಾಶ ದೊರೆಯುತ್ತದೆ. ರಾಷ್ಟ್ರ ಮಟ್ಟದಲ್ಲಿ ಪ್ರಥಮ ಬಹುಮಾನ ರೂ.2 ಲಕ್ಷ, ದ್ವಿತೀಯಬಹುಮಾನ ರೂ.1.5 ಮತ್ತು ತೃತೀಯ ಬಹುಮಾನ ರೂ.1 ಲಕ್ಷ ಮತ್ತು ಇಬ್ಬರಿಗೆ ಸಮಾಧಾನಕರ ಬಹುಮಾನವಾಗಿ ರೂ.50,000 ನೀಡಲಾಗುವುದು.


ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಈ ಅಭ್ಯರ್ಥಿಗಳಿಗೆ ನೆಹರು ಯುವ ಕೇಂದ್ರ ಅಭಿನಂದನೆ ತಿಳಿಸುತ್ತಾ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲೆಂದು ಹಾರೈಸಿದೆ ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆಟಿಕೆ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!