ಅಂಬಿಗರ ಚೌಡಯ್ಯನವರು ಎಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವಚನಕಾರರು ; ತಹಶೀಲ್ದಾರ್ ರಶ್ಮಿ ಹೆಚ್.ಜೆ.

ಹೊಸನಗರ: 12ನೇ ಶತಮಾನದಲ್ಲಿ ಜೀವಿಸಿದ ಶಿವಶರಣ ಹಾಗೂ ವಚನಕಾರರು ಉಳಿದ್ದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇರುವವರು. ವೃತ್ತಿಯಲ್ಲಿ ಅಂಬಿಗ ಪ್ರವೃತ್ತಿಯಲ್ಲಿ ಅನುಭಾವಿ ನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ ಎಂದು ಹೊಸನಗರ ತಹಶೀಲ್ದಾರ್ ಹೆಚ್.ಜೆ ರಶ್ಮಿ ಹೇಳಿದರು.

ಇಲ್ಲಿನ ತಾಲ್ಲೂಕು ಕಛೇರಿಯ ಆವರಣದಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವ ತನ್ನ ಕಾಯಕ ಅಥವಾ ವ್ಯಕ್ತಿನಾಮ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳ ಅಂಕಿತವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ನಾಡ ಹಬ್ಬಗಳ ಸಮಿತಿಯ ಸದಸ್ಯರಾದ ಎನ್. ಶ್ರೀಧರ ಉಡುಪ, ತಾಲ್ಲೂಕು ಕಛೇರಿಯ ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯೋ ಇನ್ಸ್‌ಪೆಕ್ಟರ್ ರೇಣುಕಯ್ಯ, ಗ್ರಾಮ ಲೆಕ್ಕಾಧಿಕಾರಿ ಕೌಶಿಕ್, ನವೀನ್, ಅಶೋಕ, ಗಣೇಶ್, ಪೈಗಂಬರ್, ಶಿವಪ್ಪ, ನಾಗರಾಜ್ ಕಿಣಿ, ತಾಲ್ಲೂಕು ಗಂಗಾಮತಸ್ಥ ಸಮಾಜದ ಅಧ್ಯಕ್ಷರಾದ ಉಮೇಶ್ ಕೆ.ವೈ, ಗಂಗಾಧರ, ದಿನೇಶ ಜಿ, ಪ್ರಧಾನ ಕಾರ್ಯದರ್ಶಿ ಲೋಹಿತ್, ರುಕ್ರೇಶ್ ಪಾಂಡುರಂಗ, ನಾಗೇಶ ಚಂದಳ್ಳಿ, ಮಂಜುನಾಥ್ ಬ್ಯಾಣದ್, ನೀಲಾವತಿ, ರಾಘವೇಂದ್ರ, ಶ್ರೀಧರ, ಉಮೇಶ್ ಹೂವಿನಕೋಣೆ, ಧರ್ಮರಾಜ್ ಶೇಡಿಗ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

14 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

18 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

19 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

21 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

21 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago