ಶಿವಮೊಗ್ಗ: ಸರ್ಕಾರದ ಆದೇಶ ದಿನಾಂಕ:06-07-2023 ರನ್ವಯ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ ರೂ.34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯವನ್ನು ನೀಡಲಾಗುವುದಿಲ್ಲ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬದಲ್ಲಿ 4 ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯಿಸುತ್ತದೆ.
ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ.
ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವ ಮತ್ತು ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿರುವ ಒಟ್ಟು 46,868 ಫಲಾನುಭವಿ ಕುಟುಂಬಗಳ ಪಟ್ಟಿಗಳು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುತ್ತದೆ.
ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.
ಜುಲೈ ತಿಂಗಳ 20ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕುತ್ತದೆ.
ಇ-ಕೆವೈಸಿ ಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.
ಬಯೋಮೆಟ್ರಿಕ್ ಪರಿಶೀಲನೆ ಬದಲಿಗೆ ಮೊಬೈಲ್ ಒಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುತ್ತಿರುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…