ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳು ವಶಕ್ಕೆ
ಹೊಸನಗರ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.
ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿ ವಶಕ್ಕೆ ಪಡೆದಿದ್ದು ಮತ್ತೊಂದು ಪ್ರಕರಣದಲ್ಲಿ ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಹೊಸನಗರ ತಾಲೂಕು ಗ್ರಾಮ ಪಂಚಾಯತಿಗಳ ಒಕ್ಕೂಟಗಳ ಅಧ್ಯಕ್ಷ ಹಾಗೂ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿಗೆ ಸೇರಿದ ಟಿಪ್ಪರ್ ಲಾರಿಯನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ.
ಎಸಿಎಫ್ ಕೆ.ಬಿ.ಮೋಹನ್ ಮಾರ್ಗದರ್ಶನ, ಆರ್.ಎಫ್.ಒ ಎಂ.ರಾಘವೇಂದ್ರ ನೇತೃತ್ವದಲ್ಲಿ, ಉಪ ವಲಯ ಅರಣ್ಯಾಧಿಕಾರಿಗಳಾದ ಹಾಲೇಶ್ ಕುಮಾರ್, ಎಸ್.ವಿ.ಷಣ್ಮುಖ ಪಾಟೀಲ್, ಗಸ್ತು ಅರಣ್ಯ ಪಾಲಕ ಜೆಸ್ಸಿ ಲಾಯ್ಡ್ ಕಾರ್ಲೋ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.