ರಿಪ್ಪನ್ಪೇಟೆ : ಮಹಾಶಿವರಾತ್ರಿಯಂದು ಶಿವಾರಾಧನೆ ಹಾಗೂ ವಿಶೇಷ ಧಾರ್ಮಿಕ ವಿಧಿ-ವಿಧಾನದ ಮೂಲಕ ಪ್ರತಿಯೋರ್ವರೂ ಅಜ್ಞಾನವನ್ನು ತೊರೆದು ಉತ್ಕೃಷ್ಟ ಸುಜ್ಞಾನ ಪ್ರಾಪ್ತಿಯಾಗಲೆಂದು ಅಪೇಕ್ಷಿಸುತ್ತೇವೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಹೇಳಿದರು.
ಶನಿವಾರದಂದು ಬಿಲ್ಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮತ್ತು ಶಿವಾರಾಧನೆಯ ಮಹತ್ವ, ಭಾರತೀಯ ಸನಾತನ ಧರ್ಮದ ವೈಜ್ಞಾನಿಕ ತತ್ವಗಳ ಪ್ರತಿಪಾದನೆ ಮಾಡಿ, ರಾಷ್ಟ್ರ ಮತ್ತು ರಾಜ್ಯದಲ್ಲಿ ಪ್ರಕೃತಿ, ಕೃಷಿ ಆದಾಯ, ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯದಾಯಕ ಸಮಾಜದ ಏಳಿಗೆಯ ಕುರಿತು ಅವಲೋಕನ ಮಾಡಿದರು. ಸ್ವಸ್ತಿಶ್ರೀಗಳವರು ಧರ್ಮ ಪ್ರಜ್ಞೆಯ ಮೂಲಕ ಶಿವಾರಾಧನೆಯಲ್ಲಿ ಪಾಲ್ಗೊಂಡು ಉತ್ತಮ ಸಂಸ್ಕಾರ-ಸಂಸ್ಕೃತಿ ಬೆಳೆಸಲು ಸಹಯೋಗ ನೀಡಬೇಕು ಎಂದು ಆಶೀರ್ವಚನ ದಯಪಾಲಿಸಿದರು.
ಅರ್ಚಕರಾದ ದತ್ತಾತ್ರಿ ಮತ್ತು ಸಂಗಡಿಗರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಊರಿನ ಹಾಗೂ ಪರವೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…