ಅಧಿಕಾರಕ್ಕಾಗಿ ಪಕ್ಷ ವಿರೋಧಿ ನಿಲುವು ತಾಳುವುದು ಸಲ್ಲ ; ಬಿ.ವೈ. ರಾಘವೇಂದ್ರ

0 301

ರಿಪ್ಪನ್‌ಪೇಟೆ : ಅಭಿವೃದ್ದಿ ಮುಂದೆ ಅಧಿಕಾರದ ಅಮಲಿನ ಚುನಾವಣೆ ನಡೆಯುತ್ತಿದ್ದು ಮತದಾರರು ದೇಶದ ಹಿತದೃಷ್ಠಿಯಿಂದ ಆತ್ಮಾವಲೋಕನ ಮಾಡಿಕೊಂಡು ಮತ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು.

ಇಲ್ಲಿನ ವಿನಾಯಕ ವೃತ್ತದಲ್ಲಿರುವ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಲಾದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ತಮ್ಮಗಳ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯನಾಗಿ ಆಯ್ಕೆ ಆಗಿದ್ದು ಜನಮೆಚ್ಚುವ ಆಭಿವೃದ್ದಿಯನ್ನು ಮಾಡಲಾಗಿದ್ದು ಸರ್ಕಾರದ ಹಿರಿಯರಿಂದಲೂ ಪ್ರಶಂಸೆಯನ್ನು ಪಡೆದುಕೊಂಡಿದ್ದೇನೆ. ಕ್ಷೇತ್ರದಾದ್ಯಂತ ಸಾಕಷ್ಟು ಜನಪರವಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆನುದಾನವನ್ನು ತರುವುದರೊಂದಿಗೆ ಸಂಪರ್ಕ ರಸ್ತೆ, ಮೆಡಿಕಲ್‌ ಕಾಲೇಜ್, ಕೃಷಿ, ತೋಟಗಾರಿಕಾ ಕಾಲೇಜ್, ರೈಲ್ವೆ ಸ್ಟೇಷನ್, ವಿಮಾನ ನಿಲ್ದಾಣ, ಆಕಾಶವಾಣಿ, ಸರ್ವಋತು ಜೋಗ್ ಅಭಿವೃದ್ದಿ ಹಾಗೂ ತುಮರಿ ಸಂಪರ್ಕದ ಸೇತುವೆ ನಿರ್ಮಾಣ ಕಾಮಗಾರಿಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೇಂದ್ರದಿಂದ 20 ಸಾವಿರ ಕೋಟಿ ರೂ. ಅನುದಾನವನ್ನು ತಂದಿರುವುದಾಗಿ ವಿವರಿಸಿ, ಕೊಲ್ಲೂರಿಗೆ ಹೊಸನಗರದಿಂದ ಅಡಗೋಡಿ ತಿರುವು ರಹಿತ ರಸ್ತೆ ಸೇತುವೆ, ಕೊಡಚಾದ್ರಿಗೆ ರೋಪ್‌ವೇ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಹಾಗೆಯೇ ಮೇಗರವಳ್ಳಿಯಿಂದ ಮಣಿಪಾಲದವರಗೆ 12 ಕೋಟಿ ರೂ. ವೆಚ್ಚದ ಸುರಂಗ ಮಾರ್ಗ ಕಾಮಗಾರಿಗೆ ಯೋಜನಾ ವರದಿ ನೀಡಲಾಗಿದ್ದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಕೇವಲ ಒಂದೇ ವಾರದಲ್ಲಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಹೇಳಿದರು.

ಬಿಜೆಪಿ ಮಹಿಳೆ ರಾಜ್ಯಾಧ್ಯಕ್ಷ ಮಂಜುಳಾ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಎಲ್ಲಾ ಕ್ಷೇತ್ರದಲ್ಲಿಯೂ ವಿಫಲವಾಗಿದ್ದು ಕಾನೂನು ಸುವ್ಯವಸ್ಥೆಯನ್ನು ಪುಂಡರ ಕೈಯಲ್ಲಿ ಅಡವಿಟ್ಟಿದೆ ಅಡುಗೆ ಮನೆಯಿಂದ ಕುಟುಂಬವನ್ನು ಮೆಚ್ಚಿಸಿದ ಮಹಿಳೆಯರು ಈಗ ದೇಶವನ್ನು ಗೆಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿ ಬಿ.ವೈ.ರಾಘವೇಂದ್ರರವರನ್ನು ವಿರೋಧ ಪಕ್ಷದವರು ಮೆರಿಟ್ ಮೇಲೆ ಗೆಲ್ಲಲು ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್ ಏಜೆಂಟರು ಚುನಾವಣೆಯನ್ನು ಸುಳ್ಳು ವಾಮಮಾರ್ಗದಿಂದ ಗೆಲ್ಲುವ ಹುನ್ನಾರ ಮಾಡುತ್ತಿದ್ದಾರೆ. ಭವಿಷ್ಯದ ಭಾರತ ನಾರಿಶಕ್ತಿಯ ಮೂಲಕ ಮುನ್ನೆಡೆಯುವುದಿದೆ. ಇದನ್ನು ಸಾಕಾರಗೊಳಿಸಬೇಕಾದರೆ ಪ್ರತಿ ಮಹಿಳೆಯರು ಮತದಾರರನ್ನು ಸಂಪರ್ಕಿಸಿ ಬಿಜೆಪಿಯನ್ನು ಬೆಂಬಲಿಸುವಂತೆ ಮನಃಪರಿವರ್ತನೆ ಮಾಡಿ ಪಕ್ಷಕ್ಕೆ ಮತ ಕೊಡಿಸಬೇಕೆಂದರು.

ಸಮಾವೇಶದಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ, ಮಹಿಳಾ ಅಧ್ಯಕ್ಷೆ ಆಶಾ ರವೀಂದ್ರ, ಮುಖಂಡರಾದ ವೀಣಾಶೆಟ್ಟಿ, ಜೆಡಿಎಸ್ ಮುಖಂಡ ಆರ್.ಎ.ಚಾಬುಸಾಬ್, ಎನ್ ವರ್ತೇಶ್, ಜಿ.ಎಸ್.ವರದರಾಜ್, ಜಿ.ಪಂ.ಮಾಜಿ ಸದಸ್ಯೆ ಎ.ಟಿ.ನಾಗರತ್ನ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್, ಸರಸ್ವತಿ, ಲೀಲಾ ಉಮಾಶಂಕರ್, ರೇಖಾ ರವಿ, ಪದ್ಮಾ ಸುರೇಶ್, ಗಣಪತಿ ಬಿಳಗೋಡು ಇನ್ನಿತರರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!